<p><strong>ಬೆಂಗಳೂರು</strong>: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.</p>.<p>ಡಿಸೆಂಬರ್ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ. </p>.<p>ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ. </p>.<p>ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. </p>
<p><strong>ಬೆಂಗಳೂರು</strong>: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.</p>.<p>ಡಿಸೆಂಬರ್ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ. </p>.<p>ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ. </p>.<p>ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. </p>