ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಖಕಿಯರ ಸಂಘ: ಇಂದು ಮತದಾನ

Last Updated 18 ಸೆಪ್ಟೆಂಬರ್ 2022, 4:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಲಿದ್ದು,ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆಎನ್.ಆರ್. ಕಾಲೊನಿಯಲ್ಲಿರುವ ಬಿ.‌ಎಂ.ಶ್ರೀ. ಪ್ರತಿಷ್ಠಾನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಾಲಿ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್, ಲೇಖಕಿ ಎಚ್.ಎಲ್. ಪುಷ್ಪಾ ಹಾಗೂ ಕಥೆಗಾರ್ತಿ ಶೈಲಜಾ ಸುರೇಶ್ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಈಗಾಗಲೇ ಹೊರ ಜಿಲ್ಲೆಗಳಿಂದ ಅಂಚೆ ಮತದಾನ ನಡೆದಿದೆ. ಭಾನುವಾರ ಬೆಂಗಳೂರಿನಲ್ಲಿ ಮಾತ್ರ ಮತದಾನ ನಡೆಯಲಿದ್ದು,ಸಂಜೆ ಫಲಿತಾಂಶ ಘೋಷಣೆ ಆಗಲಿದೆ.

ಸಂಘದ1,330 ಸದಸ್ಯರಲ್ಲಿ 1,295 ಮಂದಿ ಮತದಾನದ ಅರ್ಹತೆ ಹೊಂದಿದ್ದಾರೆ. ಇವರಲ್ಲಿ650 ಮಂದಿ ಬೆಂಗಳೂರಿಗರೇ ಆಗಿದ್ದಾರೆ. ಚುನಾವಣೆಯಲ್ಲಿ ವಿಜೇತರಾದವರು ಮೂರು ವರ್ಷಗಳುಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT