<p><strong>ಬೆಂಗಳೂರು:</strong> ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ಮನೆಗೊಂದು ಕಲಾಕೃತಿ’ ಯೋಜನೆಯಡಿ ಇದೇ 18ರಿಂದ 21ರವರೆಗೆ ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಗ್ಯಾಲರಿಗಳಲ್ಲಿ ಆಯ್ದ 600 ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್, ‘ಅಕಾಡೆಮಿಯು ಹಲವು ವರ್ಷಗಳಿಂದ ಯುವ ಕಲಾವಿದರಿಗೆ ತರಬೇತಿ, ಕಾರ್ಯಾಗಾರ, ಶಿಬಿರಗಳನ್ನು ನಡೆಸುಕೊಂಡು ಬರುತ್ತಿದೆ. ಈ ಅವಧಿಯಲ್ಲಿ ನೂರಾರು ಕಲಾವಿದರಿಂದ ಸಾವಿರಾರು ಕಲಾಕೃತಿಗಳು ರಚಿತವಾಗಿವೆ. ಅವುಗಳಲ್ಲಿ ಅತ್ಯುತ್ತಮವಾದ 600 ಕಲಾಕೃತಿಗಳನ್ನು ಆಯ್ಕೆ ಮಾಡಿ, ದರ ನಿಗದಿ ಮಾಡಲಾಗಿದೆ. ಈ ಪ್ರಕ್ರಿಯೆಗೆ ಪ್ರತ್ಯೇಕ ಸಮಿತಿ ರಚಿಸಲಾಗಿತ್ತು. ಕಲಾಕೃತಿಯು ಮನೆಯ ಅಂದ ಹೆಚ್ಚಿಸುವ ಜತಗೆ ನಮ್ಮ ಮನಃಸ್ಥಿತಿ, ಅಭಿರುಚಿ, ಸಂವೇದನೆಯನ್ನು ಸದಾಕಾಲ ಪೋಷಿಸುತ್ತದೆ. ಆದ್ದರಿಂದ ಅತ್ಯಂತ ಕಡಿಮೆ ದರದಲ್ಲಿ ಕಲಾಕೃತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುತ್ತಾರೆ’ ಎಂದರು. </p>.<p>‘ಪರಿಷತ್ತಿನ ಏಳು ಗ್ಯಾಲರಿಗಳಲ್ಲಿ ಈ ಪ್ರದರ್ಶನ ನಡೆಯಲಿದೆ. ಈ ಅವಧಿಯಲ್ಲಿಯೇ ಹಣ ಪಾವತಿಸಿ, ಕಲಾಕೃತಿಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ. ಡ್ರಾಯಿಂಗ್ಗಳಿಗೆ ₹1 ಸಾವಿರದಿಂದ ₹2 ಸಾವಿರ ನಿಗದಿಪಡಿಸಿದರೆ, ಪೇಂಟಿಂಗ್ಗಳಿಗೆ ₹3 ಸಾವಿರದಿಂದ ₹30 ಸಾವಿರದವರೆಗೆ ದರ ಗೊತ್ತುಪಡಿಸಲಾಗಿದೆ. 3x3 ಅಡಿವರೆಗಿನ ಅಳತೆಯ ಕಲಾಕೃತಿಗಳಿವೆ. ಪ್ರದರ್ಶನದಲ್ಲಿ ಇರುವ ಕಲಾಕೃತಿಗಳ ಒಟ್ಟು ಮೌಲ್ಯ ₹12 ಲಕ್ಷವಾಗಿದ್ದು, ಈ ಹಣವನ್ನು ಕಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲು ಹಾಗೂ ಕಲಾಕೃತಿಗಳ ರಕ್ಷಣೆಗೆ ಬಳಸಿಕೊಳ್ಳಲಾಗುತ್ತದೆ. ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ‘ನಿಮ್ಮೊಂದಿಗೆ ನಾವು’ ಸೇರಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು. </p>.<p>ಅಕಾಡೆಮಿ ರಿಜಿಸ್ಟ್ರಾರ್ ಬಿ. ನೀಲಮ್ಮ, ‘ಕಲಾಕೃತಿಗಳು ಕೈಗೆಟುಕುವ ದರದಲ್ಲಿ ಸಿಗಬೇಕೆಂಬ ಉದ್ದೇಶದಿಂದ ಈ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಕಲಾ ಪರಂಪರೆ ಅನಾವರಣವಾಗುವ ಜತೆಗೆ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಸಹಕಾರಿಯಾಗಲಿದೆ’ ಎಂದರು.</p>.<div><blockquote>ಭಿನ್ನ ಮಾಧ್ಯಮ ಹಾಗೂ ಶೈಲಿಯ ಕಲಾಕೃತಿಗಳು ಪ್ರದರ್ಶನದಲ್ಲಿ ಕೈಗೆಟಕುವ ದರದಲ್ಲಿ ದೊರೆಯಲಿವೆ. ಕಲಾಸಕ್ತರು ಇದರ ಲಾಭ ಪಡೆದುಕೊಳ್ಳಬೇಕು</blockquote><span class="attribution"> ಪ.ಸ.ಕುಮಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ಮನೆಗೊಂದು ಕಲಾಕೃತಿ’ ಯೋಜನೆಯಡಿ ಇದೇ 18ರಿಂದ 21ರವರೆಗೆ ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಗ್ಯಾಲರಿಗಳಲ್ಲಿ ಆಯ್ದ 600 ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್, ‘ಅಕಾಡೆಮಿಯು ಹಲವು ವರ್ಷಗಳಿಂದ ಯುವ ಕಲಾವಿದರಿಗೆ ತರಬೇತಿ, ಕಾರ್ಯಾಗಾರ, ಶಿಬಿರಗಳನ್ನು ನಡೆಸುಕೊಂಡು ಬರುತ್ತಿದೆ. ಈ ಅವಧಿಯಲ್ಲಿ ನೂರಾರು ಕಲಾವಿದರಿಂದ ಸಾವಿರಾರು ಕಲಾಕೃತಿಗಳು ರಚಿತವಾಗಿವೆ. ಅವುಗಳಲ್ಲಿ ಅತ್ಯುತ್ತಮವಾದ 600 ಕಲಾಕೃತಿಗಳನ್ನು ಆಯ್ಕೆ ಮಾಡಿ, ದರ ನಿಗದಿ ಮಾಡಲಾಗಿದೆ. ಈ ಪ್ರಕ್ರಿಯೆಗೆ ಪ್ರತ್ಯೇಕ ಸಮಿತಿ ರಚಿಸಲಾಗಿತ್ತು. ಕಲಾಕೃತಿಯು ಮನೆಯ ಅಂದ ಹೆಚ್ಚಿಸುವ ಜತಗೆ ನಮ್ಮ ಮನಃಸ್ಥಿತಿ, ಅಭಿರುಚಿ, ಸಂವೇದನೆಯನ್ನು ಸದಾಕಾಲ ಪೋಷಿಸುತ್ತದೆ. ಆದ್ದರಿಂದ ಅತ್ಯಂತ ಕಡಿಮೆ ದರದಲ್ಲಿ ಕಲಾಕೃತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುತ್ತಾರೆ’ ಎಂದರು. </p>.<p>‘ಪರಿಷತ್ತಿನ ಏಳು ಗ್ಯಾಲರಿಗಳಲ್ಲಿ ಈ ಪ್ರದರ್ಶನ ನಡೆಯಲಿದೆ. ಈ ಅವಧಿಯಲ್ಲಿಯೇ ಹಣ ಪಾವತಿಸಿ, ಕಲಾಕೃತಿಗಳನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ. ಡ್ರಾಯಿಂಗ್ಗಳಿಗೆ ₹1 ಸಾವಿರದಿಂದ ₹2 ಸಾವಿರ ನಿಗದಿಪಡಿಸಿದರೆ, ಪೇಂಟಿಂಗ್ಗಳಿಗೆ ₹3 ಸಾವಿರದಿಂದ ₹30 ಸಾವಿರದವರೆಗೆ ದರ ಗೊತ್ತುಪಡಿಸಲಾಗಿದೆ. 3x3 ಅಡಿವರೆಗಿನ ಅಳತೆಯ ಕಲಾಕೃತಿಗಳಿವೆ. ಪ್ರದರ್ಶನದಲ್ಲಿ ಇರುವ ಕಲಾಕೃತಿಗಳ ಒಟ್ಟು ಮೌಲ್ಯ ₹12 ಲಕ್ಷವಾಗಿದ್ದು, ಈ ಹಣವನ್ನು ಕಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲು ಹಾಗೂ ಕಲಾಕೃತಿಗಳ ರಕ್ಷಣೆಗೆ ಬಳಸಿಕೊಳ್ಳಲಾಗುತ್ತದೆ. ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ‘ನಿಮ್ಮೊಂದಿಗೆ ನಾವು’ ಸೇರಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು. </p>.<p>ಅಕಾಡೆಮಿ ರಿಜಿಸ್ಟ್ರಾರ್ ಬಿ. ನೀಲಮ್ಮ, ‘ಕಲಾಕೃತಿಗಳು ಕೈಗೆಟುಕುವ ದರದಲ್ಲಿ ಸಿಗಬೇಕೆಂಬ ಉದ್ದೇಶದಿಂದ ಈ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಕಲಾ ಪರಂಪರೆ ಅನಾವರಣವಾಗುವ ಜತೆಗೆ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಸಹಕಾರಿಯಾಗಲಿದೆ’ ಎಂದರು.</p>.<div><blockquote>ಭಿನ್ನ ಮಾಧ್ಯಮ ಹಾಗೂ ಶೈಲಿಯ ಕಲಾಕೃತಿಗಳು ಪ್ರದರ್ಶನದಲ್ಲಿ ಕೈಗೆಟಕುವ ದರದಲ್ಲಿ ದೊರೆಯಲಿವೆ. ಕಲಾಸಕ್ತರು ಇದರ ಲಾಭ ಪಡೆದುಕೊಳ್ಳಬೇಕು</blockquote><span class="attribution"> ಪ.ಸ.ಕುಮಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>