<p><strong>ಬೆಂಗಳೂರು</strong>: ಕರೂರು ವೈಶ್ಯ ಬ್ಯಾಂಕ್ನಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣದ ತನಿಖೆ ನಡೆಸಿದ್ದ ಕೆಂಗೇರಿ ಠಾಣೆಯ ಪೊಲೀಸರು, ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಹಾಗೂ ಅವರ ಪತಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.</p>.<p>₹5 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕಿ ಅಶ್ವಿನಿ ಹಾಗೂ ಅವರ ಪತಿ, ಸಾಫ್ಟ್ವೇರ್ ಎಂಜಿನಿಯರ್ ರವಿ ಪಾತ್ರವಿರುವುದು ಕಂಡುಬಂದಿದೆ ಎಂದು ಪೊಲೀಸರು ಹೇಳಿದರು.</p>.<p>‘ಅಶ್ವಿನಿ ಹಾಗೂ ರವಿ ಅವರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅ.7ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಮೇಲೆ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘2022ರಿಂದಲೂ ಅಶ್ವಿನಿ ಅವರು ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಚಿನ್ನದ ಮೇಲಿನ ಸಾಲ ವಸೂಲಾತಿ ವಿಭಾಗದ ಉಸ್ತುವಾರಿ ಯನ್ನೂ ಅವರು ನೋಡಿ ಕೊಳ್ಳುತ್ತಿದ್ದರು. ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದುಕೊಳ್ಳಲು ಆಭರಣ ಗಳನ್ನು ಬ್ಯಾಂಕ್ನಲ್ಲಿ ಇಟ್ಟಿದ್ದರು. ಆ ಚಿನ್ನವನ್ನು ಆರೋಪಿಗಳು ತೆಗೆದುಕೊಂಡು ನಕಲಿ ಚಿನ್ನವನ್ನು ಇಟ್ಟಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಸಹಾಯಕ ವ್ಯವಸ್ಥಾಪಕಿ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಅಶ್ವಿನಿ ಅವರಿಗೆ ಆನ್ಲೈನ್ನಲ್ಲಿ ಆಟವಾಡುವ ಚಟವಿತ್ತು. ಅದಕ್ಕೆ ಹಣ ಹೊಂದಿಸಲು ಅಶ್ವಿನಿ ಅವರು ಬ್ಯಾಂಕ್ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನು ತೆಗೆದುಕೊಂಡು ಕಡಿಮೆ ತೂಕದ ಆಭರಣವನ್ನು ಇಟ್ಟಿದ್ದರು. ಜತೆಗೆ ನಕಲಿ ಆಭರಣಗಳನ್ನೂ ಲಾಕರ್ನಲ್ಲಿ ಇಟ್ಟಿದ್ದರು. ಕದ್ದ ಚಿನ್ನವನ್ನು ಪತಿ ರವಿಗೆ ನೀಡಿ, ಬೇರೆ ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಅಡಮಾನವಿಟ್ಟು ಸಾಲ ಪಡೆದುಕೊಂಡಿ ದ್ದರು. ಆರೋಪಿಗಳ ವಿಚಾರಣೆ ವೇಳೆ ಈ ಸಂಗತಿ ಗೊತ್ತಾಗಿದೆ. ಈ ಎಲ್ಲ ವಿವರವನ್ನು ದೋಷಾರೋಪ ಪಟ್ಟಿಯಲ್ಲಿ ನಮೂದಿ ಸಲಾಗುವುದು’ ಎಂದು ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದರು.</p>.<p>‘ಮಾರ್ಗಸೂಚಿ ಪ್ರಕಾರ ಚಿನ್ನದ ಸಾಲಗಳ ತ್ರೈಮಾಸಿಕ ಮರುಮೌಲ್ಯ ಮಾಪನ ಹಾಗೂ ಲೆಕ್ಕ ಪರಿಶೋಧನೆ ವೇಳೆ ಅಡಮಾನ ಇಡಲಾದ ಚಿನ್ನದ ತೂಕ ಕಡಿಮೆ ಆಗಿರುವುದು ಹಾಗೂ ನಕಲಿ ಚಿನ್ನವನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಂಕ್ನ ವ್ಯವಸ್ಥಾಪಕ ಮಹೇಶ್ ಚಿಂತಕಾಲಯ ಅವರು ಕೆಂಗೇರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ದೂರು ದಾಖಲಾದ ಮೇಲೆ ಆರೋಪಿಗಳ ಮನೆಯ ಮೇಲೆ ದಾಳಿ ನಡೆಸಲಾಗಿತ್ತು. ಬ್ಯಾಂಕ್ ದಾಖಲೆ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರೂರು ವೈಶ್ಯ ಬ್ಯಾಂಕ್ನಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣದ ತನಿಖೆ ನಡೆಸಿದ್ದ ಕೆಂಗೇರಿ ಠಾಣೆಯ ಪೊಲೀಸರು, ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಹಾಗೂ ಅವರ ಪತಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.</p>.<p>₹5 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕಿ ಅಶ್ವಿನಿ ಹಾಗೂ ಅವರ ಪತಿ, ಸಾಫ್ಟ್ವೇರ್ ಎಂಜಿನಿಯರ್ ರವಿ ಪಾತ್ರವಿರುವುದು ಕಂಡುಬಂದಿದೆ ಎಂದು ಪೊಲೀಸರು ಹೇಳಿದರು.</p>.<p>‘ಅಶ್ವಿನಿ ಹಾಗೂ ರವಿ ಅವರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅ.7ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಮೇಲೆ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘2022ರಿಂದಲೂ ಅಶ್ವಿನಿ ಅವರು ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಚಿನ್ನದ ಮೇಲಿನ ಸಾಲ ವಸೂಲಾತಿ ವಿಭಾಗದ ಉಸ್ತುವಾರಿ ಯನ್ನೂ ಅವರು ನೋಡಿ ಕೊಳ್ಳುತ್ತಿದ್ದರು. ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದುಕೊಳ್ಳಲು ಆಭರಣ ಗಳನ್ನು ಬ್ಯಾಂಕ್ನಲ್ಲಿ ಇಟ್ಟಿದ್ದರು. ಆ ಚಿನ್ನವನ್ನು ಆರೋಪಿಗಳು ತೆಗೆದುಕೊಂಡು ನಕಲಿ ಚಿನ್ನವನ್ನು ಇಟ್ಟಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಸಹಾಯಕ ವ್ಯವಸ್ಥಾಪಕಿ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಅಶ್ವಿನಿ ಅವರಿಗೆ ಆನ್ಲೈನ್ನಲ್ಲಿ ಆಟವಾಡುವ ಚಟವಿತ್ತು. ಅದಕ್ಕೆ ಹಣ ಹೊಂದಿಸಲು ಅಶ್ವಿನಿ ಅವರು ಬ್ಯಾಂಕ್ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನು ತೆಗೆದುಕೊಂಡು ಕಡಿಮೆ ತೂಕದ ಆಭರಣವನ್ನು ಇಟ್ಟಿದ್ದರು. ಜತೆಗೆ ನಕಲಿ ಆಭರಣಗಳನ್ನೂ ಲಾಕರ್ನಲ್ಲಿ ಇಟ್ಟಿದ್ದರು. ಕದ್ದ ಚಿನ್ನವನ್ನು ಪತಿ ರವಿಗೆ ನೀಡಿ, ಬೇರೆ ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಅಡಮಾನವಿಟ್ಟು ಸಾಲ ಪಡೆದುಕೊಂಡಿ ದ್ದರು. ಆರೋಪಿಗಳ ವಿಚಾರಣೆ ವೇಳೆ ಈ ಸಂಗತಿ ಗೊತ್ತಾಗಿದೆ. ಈ ಎಲ್ಲ ವಿವರವನ್ನು ದೋಷಾರೋಪ ಪಟ್ಟಿಯಲ್ಲಿ ನಮೂದಿ ಸಲಾಗುವುದು’ ಎಂದು ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದರು.</p>.<p>‘ಮಾರ್ಗಸೂಚಿ ಪ್ರಕಾರ ಚಿನ್ನದ ಸಾಲಗಳ ತ್ರೈಮಾಸಿಕ ಮರುಮೌಲ್ಯ ಮಾಪನ ಹಾಗೂ ಲೆಕ್ಕ ಪರಿಶೋಧನೆ ವೇಳೆ ಅಡಮಾನ ಇಡಲಾದ ಚಿನ್ನದ ತೂಕ ಕಡಿಮೆ ಆಗಿರುವುದು ಹಾಗೂ ನಕಲಿ ಚಿನ್ನವನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಂಕ್ನ ವ್ಯವಸ್ಥಾಪಕ ಮಹೇಶ್ ಚಿಂತಕಾಲಯ ಅವರು ಕೆಂಗೇರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ದೂರು ದಾಖಲಾದ ಮೇಲೆ ಆರೋಪಿಗಳ ಮನೆಯ ಮೇಲೆ ದಾಳಿ ನಡೆಸಲಾಗಿತ್ತು. ಬ್ಯಾಂಕ್ ದಾಖಲೆ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>