<p><strong>ಬೆಂಗಳೂರು</strong>: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇದೇ 29ಕ್ಕೆ ನಿಗದಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಸರ್ವಸದಸ್ಯರ ಸಭೆಯನ್ನು ರದ್ದುಪಡಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ. </p>.<p>ಈ ಸಭೆಗೆ ಗೊತ್ತುಪಡಿಸಿದ ಸ್ಥಳವು ಸೂಕ್ತವಾಗಿಲ್ಲ. ಪರಿಷತ್ತಿನ ಸರ್ವಸದಸ್ಯರ ಹಿತದೃಷ್ಟಿಯಿಂದ ಈ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಸದಸ್ಯರು ಭಾಗವಹಿಸಲು ಅನುಕೂಲವಾಗುವಂತೆ, ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಸ್ಥಳದಲ್ಲಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. </p>.<p>ಈ ಸಭೆಯನ್ನು ರದ್ದುಪಡಿಸುವಂತೆ ಜಾಣಗೆರೆ ವೆಂಕಟರಾಮಯ್ಯ, ಡಾ.ವಸುಂಧರಾ ಭೂಪತಿ ಹಾಗೂ ಇತರರು ಸಹಕಾರ ಇಲಾಖೆಗೆ ಮನವಿ ಮಾಡಿದ್ದರು. ‘ಪರಿಷತ್ತಿನ ಲೆಕ್ಕಪತ್ರಕ್ಕೆ ವಾಮಮಾರ್ಗದ ಮೂಲಕ ಅನುಮೋದನೆ ಪಡೆದುಕೊಳ್ಳಲು ಕಸಾಪ ಅಧ್ಯಕ್ಷರು ಪ್ರಯತ್ನಿಸುತ್ತಿದ್ದಾರೆ. ಈ ಸಭೆಯ ಬಗ್ಗೆ ಆಜೀವ ಸದಸ್ಯರಿಗೆ ನೋಟಿಸ್ ಕೂಡ ನೀಡಿಲ್ಲ. ಮೂಲಸೌಕರ್ಯ ಇಲ್ಲದ ಸ್ಥಳದಲ್ಲಿ ಈ ಸಭೆ ನಡೆಸುತ್ತಿದ್ದು, ಪರಿಷತ್ತಿನ ಬೈ–ಲಾಕ್ಕೆ ವಾಮಮಾರ್ಗದಲ್ಲಿ ತಿದ್ದುಪಡಿಗೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸಭೆಯನ್ನು ಬೆಂಗಳೂರು ಅಥವಾ ಹೆಚ್ಚು ಸದಸ್ಯರಿರುವ ಜಿಲ್ಲಾ ಕೇಂದ್ರದಲ್ಲಿ, ಮೂಲಸೌಕರ್ಯ ಇರುವ ಪ್ರದೇಶದಲ್ಲಿ ನಡೆಸಬೇಕು’ ಎಂದು ಮನವಿ ಮಾಡಿದ್ದರು. </p>.<p>ಈ ಬಗ್ಗೆ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಇತರರು ಕೂಡ ದೂರು ನೀಡಿ, ಕಸಾಪ ಅಧ್ಯಕ್ಷರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. </p>.<p>ಮೂಲ ಸೌಲಭ್ಯ ಹಾಗೂ ವಸತಿ ಸೌಲಭ್ಯದ ಕೊರತೆ ಎದುರಿಸುತ್ತಿರುವ ಸಂಡೂರು ಸಭೆ ನಡೆಸಲು ಯೋಗ್ಯವಾದ ಸ್ಥಳವಲ್ಲ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಾಲ್ಲೂಕು ದಂಡಾಧಿಕಾರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಆಧಾರದಲ್ಲಿ ಸಭೆಗೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಸಿದ್ದರು.</p>.<p>ಸೂಕ್ತ ಸ್ಥಳಾವಕಾಶ, ಮೂಲಸೌಲಭ್ಯದ ಕೊರತೆ ಹಾಗೂ ವಸತಿ ಸಮಸ್ಯೆಯ ಕಾರಣ ಸಭೆಯನ್ನು ರದ್ದುಪಡಿಸಲು ತೀರ್ಮಾನಿಸಿರುವುದಾಗಿ ಸಹಕಾರ ಸಂಘಗಳ ಉಪ ನಿಬಂಧಕರು ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇದೇ 29ಕ್ಕೆ ನಿಗದಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಸರ್ವಸದಸ್ಯರ ಸಭೆಯನ್ನು ರದ್ದುಪಡಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ. </p>.<p>ಈ ಸಭೆಗೆ ಗೊತ್ತುಪಡಿಸಿದ ಸ್ಥಳವು ಸೂಕ್ತವಾಗಿಲ್ಲ. ಪರಿಷತ್ತಿನ ಸರ್ವಸದಸ್ಯರ ಹಿತದೃಷ್ಟಿಯಿಂದ ಈ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಸದಸ್ಯರು ಭಾಗವಹಿಸಲು ಅನುಕೂಲವಾಗುವಂತೆ, ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಸ್ಥಳದಲ್ಲಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. </p>.<p>ಈ ಸಭೆಯನ್ನು ರದ್ದುಪಡಿಸುವಂತೆ ಜಾಣಗೆರೆ ವೆಂಕಟರಾಮಯ್ಯ, ಡಾ.ವಸುಂಧರಾ ಭೂಪತಿ ಹಾಗೂ ಇತರರು ಸಹಕಾರ ಇಲಾಖೆಗೆ ಮನವಿ ಮಾಡಿದ್ದರು. ‘ಪರಿಷತ್ತಿನ ಲೆಕ್ಕಪತ್ರಕ್ಕೆ ವಾಮಮಾರ್ಗದ ಮೂಲಕ ಅನುಮೋದನೆ ಪಡೆದುಕೊಳ್ಳಲು ಕಸಾಪ ಅಧ್ಯಕ್ಷರು ಪ್ರಯತ್ನಿಸುತ್ತಿದ್ದಾರೆ. ಈ ಸಭೆಯ ಬಗ್ಗೆ ಆಜೀವ ಸದಸ್ಯರಿಗೆ ನೋಟಿಸ್ ಕೂಡ ನೀಡಿಲ್ಲ. ಮೂಲಸೌಕರ್ಯ ಇಲ್ಲದ ಸ್ಥಳದಲ್ಲಿ ಈ ಸಭೆ ನಡೆಸುತ್ತಿದ್ದು, ಪರಿಷತ್ತಿನ ಬೈ–ಲಾಕ್ಕೆ ವಾಮಮಾರ್ಗದಲ್ಲಿ ತಿದ್ದುಪಡಿಗೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸಭೆಯನ್ನು ಬೆಂಗಳೂರು ಅಥವಾ ಹೆಚ್ಚು ಸದಸ್ಯರಿರುವ ಜಿಲ್ಲಾ ಕೇಂದ್ರದಲ್ಲಿ, ಮೂಲಸೌಕರ್ಯ ಇರುವ ಪ್ರದೇಶದಲ್ಲಿ ನಡೆಸಬೇಕು’ ಎಂದು ಮನವಿ ಮಾಡಿದ್ದರು. </p>.<p>ಈ ಬಗ್ಗೆ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಇತರರು ಕೂಡ ದೂರು ನೀಡಿ, ಕಸಾಪ ಅಧ್ಯಕ್ಷರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. </p>.<p>ಮೂಲ ಸೌಲಭ್ಯ ಹಾಗೂ ವಸತಿ ಸೌಲಭ್ಯದ ಕೊರತೆ ಎದುರಿಸುತ್ತಿರುವ ಸಂಡೂರು ಸಭೆ ನಡೆಸಲು ಯೋಗ್ಯವಾದ ಸ್ಥಳವಲ್ಲ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಾಲ್ಲೂಕು ದಂಡಾಧಿಕಾರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಆಧಾರದಲ್ಲಿ ಸಭೆಗೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಸಿದ್ದರು.</p>.<p>ಸೂಕ್ತ ಸ್ಥಳಾವಕಾಶ, ಮೂಲಸೌಲಭ್ಯದ ಕೊರತೆ ಹಾಗೂ ವಸತಿ ಸಮಸ್ಯೆಯ ಕಾರಣ ಸಭೆಯನ್ನು ರದ್ದುಪಡಿಸಲು ತೀರ್ಮಾನಿಸಿರುವುದಾಗಿ ಸಹಕಾರ ಸಂಘಗಳ ಉಪ ನಿಬಂಧಕರು ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>