ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಲು ಚಂದ್ರ ಆರ್ಯಗೆ ಆಹ್ವಾನ

Last Updated 8 ಜುಲೈ 2022, 19:09 IST
ಅಕ್ಷರ ಗಾತ್ರ

ಬೆಂಗಳೂರು: ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಆಹ್ವಾನ ನೀಡಿದ್ದಾರೆ.

ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಅವರನ್ನು ಭೇಟಿ ಮಾಡಿದ ಜೋಶಿ, ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಆಹ್ವಾನಿಸಿದರು. ಕೆನಡಾ ದೇಶದ ಕನ್ನಡಿಗರನ್ನು ಒಗ್ಗೂಡಿಸಿ, ಪರಿಷತ್ತಿನ ಘಟಕಕ್ಕೆ ಮುಖ್ಯಸ್ಥರಾಗುವಂತೆಯೂ ಮನವಿ ಮಾಡಿಕೊಂಡರು. ಈ ಕೋರಿಕೆಗೆ ಚಂದ್ರ ಆರ್ಯ ಸಮ್ಮತಿ ಸೂಚಿಸಿದ್ದಾರೆ.

ಈ ವೇಳೆ ಕಸಾಪ ಗೌರವ ಕೋಶಾಧ್ಯಕ್ಷ ಬಿ.ಎಮ್. ಪಟೇಲ್ ಪಾಂಡು ಹಾಗೂ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT