ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗ ನೋಂದಣಿಗೆ ಕಸಾಪ ಒತ್ತಾಯ

Last Updated 7 ನವೆಂಬರ್ 2020, 18:04 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಮೈಸೂರು ವಿಶ್ವವಿದ್ಯಾಲಯವು ನೀಡಿರುವ ಜಾಗದ ನೋಂದಣಿ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಒತ್ತಾಯಿಸಿದೆ. ‌

ಈ ಬಗ್ಗೆ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ ಕುಮಾರ್ ಹಾಗೂ ಅಲ್ಲಿರುವ ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ. ವೆಂಕಟೇಶಪೂರ್ತಿ ಅವರಿಗೆ ಪತ್ರ ಬರೆದಿದ್ದಾರೆ.

‘ಅಧ್ಯಯನ ಕೇಂದ್ರಕ್ಕಾಗಿ ವಿಶ್ವವಿದ್ಯಾಲಯವು 4 ಎಕರೆ ಜಾಗ ನೀಡಿದೆ. ಭಾಷಾ ಸಂಸ್ಥಾನವು ವಿಶ್ವವಿದ್ಯಾಲಯದೊಂದಿಗೆ ಆದ್ಯತೆಯ ಮೇರೆಗೆ ಒಡಂಬಡಿಕೆ ಮಾಡಿಕೊಂಡು, ಜಾಗ ನೋಂದಣಿ ಕಾರ್ಯವನ್ನು ತ್ವರಿತವಾಗಿ ಪೂರೈಸಬೇಕು. ಈಗಾಗಲೇ ಕೇಂದ್ರದ ನಿರ್ಮಾಣ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿದ್ದು, ಇನ್ನಷ್ಟು ತಡ ಮಾಡಬಾರದು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT