<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಬರಹಗಾರ ಸಂಪಟೂರು ವಿಶ್ವನಾಥ್ ಮತ್ತು ಸಂಶೋಧಕ ಶ್ರೀವತ್ಸ ಎಸ್. ವಟಿ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ. ಟಿ. ಶ್ರೀನಿವಾಸ ಅವರ ಸ್ಮರಣಾರ್ಥ ಬರಹಗಾರ್ತಿ ವರದಾ ಶ್ರೀನಿವಾಸ್ ಅವರು ಈ ದತ್ತಿಯನ್ನು ಕಸಾಪದಲ್ಲಿ ಸ್ಥಾಪಿಸಿದ್ದಾರೆ. ಎಲೆಮರೆಯ ಕಾಯಿಯಂತೆ ಸಾಹಿತ್ಯ ಸೇವೆ ಸಲ್ಲಿಸುವ ಸಾಧಕರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.</p>.<p>2024ನೇ ಸಾಲಿಗೆ ಆಯ್ಕೆಯಾಗಿರುವ ಬೆಂಗಳೂರಿನ ಸಂಪಟೂರು ವಿಶ್ವನಾಥ್ ಅವರ ಐದು ಸಾವಿರಕ್ಕೂ ಅಧಿಕ ಲೇಖನಗಳು ಕನ್ನಡದ ವಿವಿಧ ವಾರ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಶಿಕ್ಷಕರಾಗಿ 36 ವರ್ಷ ಕಾರ್ಯನಿರ್ವಹಿಸಿರುವ ಅವರು, 140ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.</p>.<p>2025ನೇ ಸಾಲಿಗೆ ಆಯ್ಕೆಯಾಗಿರುವ ಹಾಸನ ಜಿಲ್ಲೆಯ ಬೇಲೂರಿನ ಶ್ರೀವತ್ಸ ಎಸ್. ವಟಿ, ಪುರಾತತ್ವ ಅಧ್ಯಯನದಲ್ಲಿ ಹಲವು ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಛಾಯಾಗ್ರಹಣ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಬರಹಗಾರ ಸಂಪಟೂರು ವಿಶ್ವನಾಥ್ ಮತ್ತು ಸಂಶೋಧಕ ಶ್ರೀವತ್ಸ ಎಸ್. ವಟಿ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ. ಟಿ. ಶ್ರೀನಿವಾಸ ಅವರ ಸ್ಮರಣಾರ್ಥ ಬರಹಗಾರ್ತಿ ವರದಾ ಶ್ರೀನಿವಾಸ್ ಅವರು ಈ ದತ್ತಿಯನ್ನು ಕಸಾಪದಲ್ಲಿ ಸ್ಥಾಪಿಸಿದ್ದಾರೆ. ಎಲೆಮರೆಯ ಕಾಯಿಯಂತೆ ಸಾಹಿತ್ಯ ಸೇವೆ ಸಲ್ಲಿಸುವ ಸಾಧಕರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.</p>.<p>2024ನೇ ಸಾಲಿಗೆ ಆಯ್ಕೆಯಾಗಿರುವ ಬೆಂಗಳೂರಿನ ಸಂಪಟೂರು ವಿಶ್ವನಾಥ್ ಅವರ ಐದು ಸಾವಿರಕ್ಕೂ ಅಧಿಕ ಲೇಖನಗಳು ಕನ್ನಡದ ವಿವಿಧ ವಾರ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಶಿಕ್ಷಕರಾಗಿ 36 ವರ್ಷ ಕಾರ್ಯನಿರ್ವಹಿಸಿರುವ ಅವರು, 140ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.</p>.<p>2025ನೇ ಸಾಲಿಗೆ ಆಯ್ಕೆಯಾಗಿರುವ ಹಾಸನ ಜಿಲ್ಲೆಯ ಬೇಲೂರಿನ ಶ್ರೀವತ್ಸ ಎಸ್. ವಟಿ, ಪುರಾತತ್ವ ಅಧ್ಯಯನದಲ್ಲಿ ಹಲವು ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಛಾಯಾಗ್ರಹಣ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>