<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ‘ಕಸಾಪ ಗೌರವ ಪ್ರಶಸ್ತಿ’ ಸ್ಥಾಪಿಸಿದ್ದು, ತಮ್ಮ ಅವಧಿಯ ಸಂಪೂರ್ಣ ಗೌರವ ಧನದ ಬಡ್ಡಿ ಹಣದಲ್ಲಿ ನಗದು ಬಹುಮಾನ ನೀಡಲು ನಿರ್ಧರಿಸಿದ್ದಾರೆ.</p>.<p>ಗೌರವ ಧನ ರೂಪದಲ್ಲಿ ಬಂದ ₹12.20 ಲಕ್ಷವನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿಯಾಗಿರಿಸಿ, ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಇಬ್ಬರು ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲು ಅವರು ನಿರ್ಧರಿಸಿದ್ದಾರೆ. ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.</p>.<p>ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ, 60 ವರ್ಷ ಮೇಲ್ಪಟ್ಟ ಇಬ್ಬರಿಗೆ (ಮಹಿಳೆ ಮತ್ತು ಪುರುಷ) ತಲಾ ₹30 ಸಾವಿರ ನಗದು, ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಮೇ ತಿಂಗಳಲ್ಲಿ ಕಸಾಪ ವತಿಯಿಂದ ಕಾರ್ಯಕ್ರಮ ಹಮ್ಮಿಳ್ಳಲು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.</p>.<p>ಬಿ.ಟಿ. ಲಲಿತಾ ನಾಯಕ್, ಡಾ. ವಸುಂಧರಾ ಭೂಪತಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪದ್ಮರಾಜ ದಂಡಾವತಿ, ಕೆ. ರಾಜಕುಮಾರ್, ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ‘ಕಸಾಪ ಗೌರವ ಪ್ರಶಸ್ತಿ’ ಸ್ಥಾಪಿಸಿದ್ದು, ತಮ್ಮ ಅವಧಿಯ ಸಂಪೂರ್ಣ ಗೌರವ ಧನದ ಬಡ್ಡಿ ಹಣದಲ್ಲಿ ನಗದು ಬಹುಮಾನ ನೀಡಲು ನಿರ್ಧರಿಸಿದ್ದಾರೆ.</p>.<p>ಗೌರವ ಧನ ರೂಪದಲ್ಲಿ ಬಂದ ₹12.20 ಲಕ್ಷವನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿಯಾಗಿರಿಸಿ, ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಇಬ್ಬರು ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲು ಅವರು ನಿರ್ಧರಿಸಿದ್ದಾರೆ. ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.</p>.<p>ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ, 60 ವರ್ಷ ಮೇಲ್ಪಟ್ಟ ಇಬ್ಬರಿಗೆ (ಮಹಿಳೆ ಮತ್ತು ಪುರುಷ) ತಲಾ ₹30 ಸಾವಿರ ನಗದು, ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಮೇ ತಿಂಗಳಲ್ಲಿ ಕಸಾಪ ವತಿಯಿಂದ ಕಾರ್ಯಕ್ರಮ ಹಮ್ಮಿಳ್ಳಲು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.</p>.<p>ಬಿ.ಟಿ. ಲಲಿತಾ ನಾಯಕ್, ಡಾ. ವಸುಂಧರಾ ಭೂಪತಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪದ್ಮರಾಜ ದಂಡಾವತಿ, ಕೆ. ರಾಜಕುಮಾರ್, ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>