ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆ ಪತ್ರಿಕೆಯಲ್ಲಿ ಆಂಗ್ಲ ಪದ ಬಳಕೆಗೆ ಕಸಾಪ ಆಕ್ಷೇಪ

ಅಭ್ಯರ್ಥಿಗಳಿಗೆ ಕೃಪಾಂಕ ನೀಡುವಂತೆ ಒತ್ತಾಯ
Last Updated 23 ಸೆಪ್ಟೆಂಬರ್ 2020, 23:06 IST
ಅಕ್ಷರ ಗಾತ್ರ

ಬೆಂಗಳೂರು: ಸಿವಿಲ್‌ (ನಾಗರಿಕ ) ಪೊಲೀಸ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಕನ್ನಡ ಮಾಧ್ಯಮ ಪ್ರಶ್ನೆಪತ್ರಿಕೆಯಲ್ಲಿ ಯಥೇಚ್ಛವಾಗಿ ಆಂಗ್ಲ ಪದಗಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮನು ಬಳಿಗಾರ್, ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೃಪಾಂಕ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹಾಗೂ ಗೃಹ ಕಾರ್ಯದರ್ಶಿ ಡಿ. ರೂಪಾ ಅವರಿಗೆ ಪತ್ರ ಬರೆದಿದ್ದಾರೆ.

‘ಪ್ರಶ್ನೆ ಪತ್ರಿಕೆ ದೋಷಪೂರಿತವಾಗಿದ್ದು, ಇಂಗ್ಲಿಷ್ ಪದಗ ಳನ್ನು ಕನ್ನಡದ ಲಿಪಿ ಯಲ್ಲಿ ಬರೆಯ ಲಾಗಿದೆ. ಕನ್ನಡ ವನ್ನು ಕ್ರಿಯಾಪದದ ಮಟ್ಟದಲ್ಲಿ ಮಾತ್ರ ಬಳಕೆ ಮಾಡಲಾಗಿದೆ. ಪ್ರಶ್ನೆಯ ಬಹುತೇಕ ಪದಗಳು ಆಂಗ್ಲ ಭಾಷೆ ಯದ್ದಾಗಿದೆ. ಇದು ಕನ್ನಡದ ಬಗ್ಗೆ ಇರುವ ತಾತ್ಸಾರ ಭಾವನೆಯನ್ನು ತೋರಿಸುತ್ತದೆ. ಪ್ರಶ್ನೆ ಪತ್ರಿಕೆಯಲ್ಲಿನ ದೋಷದಿಂದ ಗ್ರಾಮೀಣ ಭಾಗದ ಅಭ್ಯರ್ಥಿಗಳು ಕಡಿಮೆ ಅಂಕ ಪಡೆಯುವ ಸಾಧ್ಯತೆಯಿದೆ. ಹಾಗಾಗಿ ಕೃಪಾಂಕ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT