<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಗೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನಕ್ಕಾಗಿ ಕಸಾಪ ಆಡಳಿತಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. </p>.<p>ಪರಿಷತ್ತಿನಲ್ಲಿ ಒಟ್ಟು 46 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಕ್ಟೋಬರ್ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಗಾಯಿತ್ರಿ ಅವರು 2025ರ ನವೆಂಬರ್ನಲ್ಲಿಯೂ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಸೂಕ್ತ ನಿರ್ದೇಶನ ದೊರೆಯದ ಕಾರಣ ಮತ್ತೊಮ್ಮೆ ಪತ್ರ ಬರೆದಿದ್ದಾರೆ. </p>.<p>‘ಸಿಬ್ಬಂದಿಯಲ್ಲಿ ಇಬ್ಬರು ಮಾತ್ರ ಕಾಯಂ ನೌಕರರಾಗಿದ್ದು, ಅವರಿಗೆ ಸರ್ಕಾರದ ನಿಯಮಾನುಸಾರ ವೇತನ ನೀಡಲಾಗಿದೆ’ ಎಂದು ಪತ್ರದಲ್ಲಿ ತಿಳಿಸಿರುವ ಆಡಳಿತಾಧಿಕಾರಿ, ಹಲವರನ್ನು ಸರ್ಕಾರದ ಅನುಮತಿ ಪಡೆಯದೆ ಭರ್ತಿ ಮಾಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ.</p>.<p>ನಿಯಮದ ಪ್ರಕಾರ ಸರ್ಕಾರದ ಅನುಮತಿ ಪಡೆದೇ ನೇಮಕ ಮಾಡಿಕೊಳ್ಳಬೇಕಾದ ಕಾರಣ, ಪರಿಷತ್ತಿನಲ್ಲಿ ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಕೋರಿದ್ದಾರೆ.</p>.<p><strong>ಭಿಕ್ಷೆ ಪ್ರತಿಭಟನೆ ಮುಂದೂಡಿಕೆ </strong></p><p>ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಪರಿಷತ್ತಿನ ಮುಂಭಾಗ ಬುಧವಾರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಂಡಿದ್ದ ಭಿಕ್ಷೆ ಪ್ರತಿಭಟನೆಯನ್ನು ಕರ್ನಾಟಕ ವಿಕಾಸರಂಗ ಮುಂದೂಡಿದೆ.</p><p> ‘ವೇತನ ಬಿಡುಗಡೆಗಾಗಿ ಸಂಬಂಧಪಟ್ಟವರ ಜತೆಗೆ ಮಾತನಾಡಿದ್ದೇವೆ. ಸಾಹಿತಿಗಳು ಸಲಹೆ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದು ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಗೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನಕ್ಕಾಗಿ ಕಸಾಪ ಆಡಳಿತಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. </p>.<p>ಪರಿಷತ್ತಿನಲ್ಲಿ ಒಟ್ಟು 46 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಕ್ಟೋಬರ್ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಗಾಯಿತ್ರಿ ಅವರು 2025ರ ನವೆಂಬರ್ನಲ್ಲಿಯೂ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಸೂಕ್ತ ನಿರ್ದೇಶನ ದೊರೆಯದ ಕಾರಣ ಮತ್ತೊಮ್ಮೆ ಪತ್ರ ಬರೆದಿದ್ದಾರೆ. </p>.<p>‘ಸಿಬ್ಬಂದಿಯಲ್ಲಿ ಇಬ್ಬರು ಮಾತ್ರ ಕಾಯಂ ನೌಕರರಾಗಿದ್ದು, ಅವರಿಗೆ ಸರ್ಕಾರದ ನಿಯಮಾನುಸಾರ ವೇತನ ನೀಡಲಾಗಿದೆ’ ಎಂದು ಪತ್ರದಲ್ಲಿ ತಿಳಿಸಿರುವ ಆಡಳಿತಾಧಿಕಾರಿ, ಹಲವರನ್ನು ಸರ್ಕಾರದ ಅನುಮತಿ ಪಡೆಯದೆ ಭರ್ತಿ ಮಾಡಿಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ.</p>.<p>ನಿಯಮದ ಪ್ರಕಾರ ಸರ್ಕಾರದ ಅನುಮತಿ ಪಡೆದೇ ನೇಮಕ ಮಾಡಿಕೊಳ್ಳಬೇಕಾದ ಕಾರಣ, ಪರಿಷತ್ತಿನಲ್ಲಿ ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಕೋರಿದ್ದಾರೆ.</p>.<p><strong>ಭಿಕ್ಷೆ ಪ್ರತಿಭಟನೆ ಮುಂದೂಡಿಕೆ </strong></p><p>ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಪರಿಷತ್ತಿನ ಮುಂಭಾಗ ಬುಧವಾರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಂಡಿದ್ದ ಭಿಕ್ಷೆ ಪ್ರತಿಭಟನೆಯನ್ನು ಕರ್ನಾಟಕ ವಿಕಾಸರಂಗ ಮುಂದೂಡಿದೆ.</p><p> ‘ವೇತನ ಬಿಡುಗಡೆಗಾಗಿ ಸಂಬಂಧಪಟ್ಟವರ ಜತೆಗೆ ಮಾತನಾಡಿದ್ದೇವೆ. ಸಾಹಿತಿಗಳು ಸಲಹೆ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದು ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>