<p><strong>ಬೆಂಗಳೂರು:</strong> ಸಂವಿಧಾನದ 370ನೇ ವಿಧಿಯ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸವಲತ್ತನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆಯಲ್ಲಿ, ನಗರದಲ್ಲಿರುವ ಕಾಶ್ಮೀರಿ ವ್ಯಾಪಾರಿಗಳ ಒಕ್ಕೂಟದ 12 ಸದಸ್ಯರ ಜೊತೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬುಧವಾರ ಚರ್ಚೆ ನಡೆಸಿದರು.</p>.<p>‘ಸಾಮಾಜಿಕ ಜಾಲತಾಣಗಳ ಮೂಲಕ ಹಬ್ಬಿಸುವ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಯಾವುದೇ ಸ್ಪಷ್ಟೀಕರಣ ಬೇಕಿದ್ದರೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ. ಸೂಕ್ತ ರಕ್ಷಣೆ ನೀಡಲು ಇಲಾಖೆ ಸಿದ್ಧ’ ಎಂದು ಕಾಶ್ಮೀರಿಗಳಿಗೆ ಭಾಸ್ಕರ್ ರಾವ್ ಭರವಸೆ ನೀಡಿದರು.</p>.<p>‘ನಗರದಲ್ಲಿ ಸುಮಾರು 10 ಸಾವಿರ ಕಾಶ್ಮೀರಿಗಳಿದ್ದಾರೆ. ಬಹುತೇಕರು ವಿದ್ಯಾರ್ಥಿಗಳು. ನಾವೆಲ್ಲರೂ ಸೌಹಾರ್ದದಿಂದ ಇದ್ದೇವೆ. ಆದರೆ, ಕಾಶ್ಮೀರದಲ್ಲಿನ ಬೆಳವಣಿಗೆಗಳ ಬಗ್ಗೆ ಚಿಂತೆ ಇದೆ’ ಎಂದು ಒಕ್ಕೂಟದ ಸದಸ್ಯರು ಆತಂಕ ತೋಡಿಕೊಂಡರು.</p>.<p>‘ನಿಮ್ಮ ಸಮುದಾಯದ ಅಹವಾಲುಗಳನ್ನು ಆಲಿಸಲು ಡಿಸಿಪಿ (ದಕ್ಷಿಣ) ರೋಹಿಣಿ ಕಟೋಚ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ’ ಎಂದೂ ಭಾಸ್ಕರ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂವಿಧಾನದ 370ನೇ ವಿಧಿಯ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸವಲತ್ತನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆಯಲ್ಲಿ, ನಗರದಲ್ಲಿರುವ ಕಾಶ್ಮೀರಿ ವ್ಯಾಪಾರಿಗಳ ಒಕ್ಕೂಟದ 12 ಸದಸ್ಯರ ಜೊತೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬುಧವಾರ ಚರ್ಚೆ ನಡೆಸಿದರು.</p>.<p>‘ಸಾಮಾಜಿಕ ಜಾಲತಾಣಗಳ ಮೂಲಕ ಹಬ್ಬಿಸುವ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಯಾವುದೇ ಸ್ಪಷ್ಟೀಕರಣ ಬೇಕಿದ್ದರೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ. ಸೂಕ್ತ ರಕ್ಷಣೆ ನೀಡಲು ಇಲಾಖೆ ಸಿದ್ಧ’ ಎಂದು ಕಾಶ್ಮೀರಿಗಳಿಗೆ ಭಾಸ್ಕರ್ ರಾವ್ ಭರವಸೆ ನೀಡಿದರು.</p>.<p>‘ನಗರದಲ್ಲಿ ಸುಮಾರು 10 ಸಾವಿರ ಕಾಶ್ಮೀರಿಗಳಿದ್ದಾರೆ. ಬಹುತೇಕರು ವಿದ್ಯಾರ್ಥಿಗಳು. ನಾವೆಲ್ಲರೂ ಸೌಹಾರ್ದದಿಂದ ಇದ್ದೇವೆ. ಆದರೆ, ಕಾಶ್ಮೀರದಲ್ಲಿನ ಬೆಳವಣಿಗೆಗಳ ಬಗ್ಗೆ ಚಿಂತೆ ಇದೆ’ ಎಂದು ಒಕ್ಕೂಟದ ಸದಸ್ಯರು ಆತಂಕ ತೋಡಿಕೊಂಡರು.</p>.<p>‘ನಿಮ್ಮ ಸಮುದಾಯದ ಅಹವಾಲುಗಳನ್ನು ಆಲಿಸಲು ಡಿಸಿಪಿ (ದಕ್ಷಿಣ) ರೋಹಿಣಿ ಕಟೋಚ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ’ ಎಂದೂ ಭಾಸ್ಕರ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>