<p><strong>ಬೆಂಗಳೂರು: ‘</strong>ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹಲವು ವರ್ಷಗಳಿಂದ ನೀಡುತ್ತಿರುವ ಬ್ಯಾಂಕ್ ಸಾಲದ ಪ್ರಮಾಣ ಶೇ 23ರಿಂದ ಶೇ 15ಕ್ಕೆ ಇಳಿದಿದೆ. ಈ ವಲಯಕ್ಕೆ ಹೆಚ್ಚಿನ ಹಣದ ಹರಿವು ಬರುವಂತೆ ಅಥವಾ ಹೆಚ್ಚು ಸಾಲ ಸೌಲಭ್ಯ ಒದಗಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಒಕ್ಕೂಟದ (ಕಾಸಿಯಾ) ಅಧ್ಯಕ್ಷ ಆರ್. ರಾಜು ಹೇಳಿದರು.</p>.<p>‘ಕೈಗಾರಿಕೆಗಳಿಗೆ ನೀಡುವ ಸಾಲದ ಮೌಲ್ಯಮಾಪನ ಮಾಡುವ ಅಗತ್ಯವೂ ಇದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾಲದ ಬಡ್ಡಿದರವನ್ನು ಶೇ 4ಕ್ಕೆ ಇಳಿಸಬೇಕು, ಸಿಡ್ಬಿ ಅಥವಾ ನಬಾರ್ಡ್ನಿಂದ ನೀಡುವ ಮರುಸಾಲ ಪ್ರಮಾಣ ಮತ್ತು ವ್ಯಾಪ್ತಿಯನ್ನು ವಿಸ್ತರಿಸಬೇಕು. ಸಾಲದ ದಾಖಲೆಗಳ ನೋಂದಣಿಗೆ ಕಟ್ಟುವ ಸ್ಟ್ಯಾಂಪ್ ಡ್ಯೂಟಿ ಮನ್ನಾ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಸಣ್ಣ ಕೈಗಾರಿಕೆಗಳು ಅತಿ ದೊಡ್ಡ ಉದ್ಯೋಗ ಕ್ಷೇತ್ರ. ದುರ್ಬಲರಿಗೆ ಉದ್ಯೋಗ ಮತ್ತು ಜೀವನೋಪಾಯ ಸೃಷ್ಟಿಸಲು ಈ ಕೈಗಾರಿಕೆಗಳ ಉಳಿವು ನಿರ್ಣಾಯಕವಾಗಿದೆ. ಕೈಗಾರಿಕೆಗಳು ಆದಷ್ಟು ಸಹಜ ಸ್ಥಿತಿಗೆ ಮರಳುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಬದಲಾದ ಸನ್ನಿವೇಶದಲ್ಲಿ ಕಾರ್ಮಿಕರ ವಿಷಯಗಳು ಸಮಸ್ಯೆಯಾಗಲಿವೆ.ಕನಿಷ್ಠ ವೇತನ ವಿಷಯಗಳಿಗೆ ಸಂಬಂಧಿಸಿದಂತೆ ಉದ್ಯಮ ಮತ್ತು ಕಾರ್ಮಿಕರ ನಡುವೆ ಯಾವುದೇ ಅನಗತ್ಯ ಸಂಘರ್ಷಗಳು ಏರ್ಪಡದಂತೆ ಸರ್ಕಾರ ನೋಡಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಈಗ ಉದ್ಯಮದ ಅಗತ್ಯಗಳಿಗೆ ಸಿದ್ಧವಾಗುವಂತೆ ಶಿಕ್ಷಣ ವ್ಯವಸ್ಥೆಯನ್ನೂ ಬದಲಾಯಿಸಬೇಕಾಗಿದೆ. ತಾಂತ್ರಿಕ ಶಿಕ್ಷಣದಲ್ಲಿ 6 ತಿಂಗಳ ಕೈಗಾರಿಕಾ ತರಬೇತಿಯನ್ನು ಕಡ್ಡಾಯಗೊಳಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p class="Subhead"><strong>ಹೂಡಿಕೆ ಹೆಚ್ಚಳ:</strong></p>.<p>‘ಭೂಸುಧಾರಣಾ ಕಾಯ್ದೆಗೆ ತರುತ್ತಿರುವ ತಿದ್ದುಪಡಿಗಳಿಂದಾಗಿಕೃಷಿ ಮತ್ತು ಆಹಾರ ಸಂಸ್ಕರಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಾಗಲಿದೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead"><strong>ಆರ್ಥಿಕ ಸಂಬಂಧಕ್ಕೆ ಹೊಡೆತ ಬೀಳದಿರಲಿ:</strong></p>.<p>‘ಚೀನಾ ದೊಡ್ಡ ಉತ್ಪಾದನಾ ಆರ್ಥಿಕ ಹೊಂದಿರುವ ದೇಶ. ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳು ಚೀನಾವನ್ನು ಅವಲಂಬಿಸಿವೆ. ಈಗಿನ ಸಂಘರ್ಷ ಉಭಯ ದೇಶಗಳ ನಡುವಣ ಆರ್ಥಿಕ ಸಂಬಂಧವನ್ನು ನಿಷ್ಕ್ರಿಯಗೊಳಿಸದಂತೆ ನೋಡಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹಲವು ವರ್ಷಗಳಿಂದ ನೀಡುತ್ತಿರುವ ಬ್ಯಾಂಕ್ ಸಾಲದ ಪ್ರಮಾಣ ಶೇ 23ರಿಂದ ಶೇ 15ಕ್ಕೆ ಇಳಿದಿದೆ. ಈ ವಲಯಕ್ಕೆ ಹೆಚ್ಚಿನ ಹಣದ ಹರಿವು ಬರುವಂತೆ ಅಥವಾ ಹೆಚ್ಚು ಸಾಲ ಸೌಲಭ್ಯ ಒದಗಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಒಕ್ಕೂಟದ (ಕಾಸಿಯಾ) ಅಧ್ಯಕ್ಷ ಆರ್. ರಾಜು ಹೇಳಿದರು.</p>.<p>‘ಕೈಗಾರಿಕೆಗಳಿಗೆ ನೀಡುವ ಸಾಲದ ಮೌಲ್ಯಮಾಪನ ಮಾಡುವ ಅಗತ್ಯವೂ ಇದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಾಲದ ಬಡ್ಡಿದರವನ್ನು ಶೇ 4ಕ್ಕೆ ಇಳಿಸಬೇಕು, ಸಿಡ್ಬಿ ಅಥವಾ ನಬಾರ್ಡ್ನಿಂದ ನೀಡುವ ಮರುಸಾಲ ಪ್ರಮಾಣ ಮತ್ತು ವ್ಯಾಪ್ತಿಯನ್ನು ವಿಸ್ತರಿಸಬೇಕು. ಸಾಲದ ದಾಖಲೆಗಳ ನೋಂದಣಿಗೆ ಕಟ್ಟುವ ಸ್ಟ್ಯಾಂಪ್ ಡ್ಯೂಟಿ ಮನ್ನಾ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಸಣ್ಣ ಕೈಗಾರಿಕೆಗಳು ಅತಿ ದೊಡ್ಡ ಉದ್ಯೋಗ ಕ್ಷೇತ್ರ. ದುರ್ಬಲರಿಗೆ ಉದ್ಯೋಗ ಮತ್ತು ಜೀವನೋಪಾಯ ಸೃಷ್ಟಿಸಲು ಈ ಕೈಗಾರಿಕೆಗಳ ಉಳಿವು ನಿರ್ಣಾಯಕವಾಗಿದೆ. ಕೈಗಾರಿಕೆಗಳು ಆದಷ್ಟು ಸಹಜ ಸ್ಥಿತಿಗೆ ಮರಳುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಬದಲಾದ ಸನ್ನಿವೇಶದಲ್ಲಿ ಕಾರ್ಮಿಕರ ವಿಷಯಗಳು ಸಮಸ್ಯೆಯಾಗಲಿವೆ.ಕನಿಷ್ಠ ವೇತನ ವಿಷಯಗಳಿಗೆ ಸಂಬಂಧಿಸಿದಂತೆ ಉದ್ಯಮ ಮತ್ತು ಕಾರ್ಮಿಕರ ನಡುವೆ ಯಾವುದೇ ಅನಗತ್ಯ ಸಂಘರ್ಷಗಳು ಏರ್ಪಡದಂತೆ ಸರ್ಕಾರ ನೋಡಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಈಗ ಉದ್ಯಮದ ಅಗತ್ಯಗಳಿಗೆ ಸಿದ್ಧವಾಗುವಂತೆ ಶಿಕ್ಷಣ ವ್ಯವಸ್ಥೆಯನ್ನೂ ಬದಲಾಯಿಸಬೇಕಾಗಿದೆ. ತಾಂತ್ರಿಕ ಶಿಕ್ಷಣದಲ್ಲಿ 6 ತಿಂಗಳ ಕೈಗಾರಿಕಾ ತರಬೇತಿಯನ್ನು ಕಡ್ಡಾಯಗೊಳಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p class="Subhead"><strong>ಹೂಡಿಕೆ ಹೆಚ್ಚಳ:</strong></p>.<p>‘ಭೂಸುಧಾರಣಾ ಕಾಯ್ದೆಗೆ ತರುತ್ತಿರುವ ತಿದ್ದುಪಡಿಗಳಿಂದಾಗಿಕೃಷಿ ಮತ್ತು ಆಹಾರ ಸಂಸ್ಕರಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಾಗಲಿದೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead"><strong>ಆರ್ಥಿಕ ಸಂಬಂಧಕ್ಕೆ ಹೊಡೆತ ಬೀಳದಿರಲಿ:</strong></p>.<p>‘ಚೀನಾ ದೊಡ್ಡ ಉತ್ಪಾದನಾ ಆರ್ಥಿಕ ಹೊಂದಿರುವ ದೇಶ. ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳು ಚೀನಾವನ್ನು ಅವಲಂಬಿಸಿವೆ. ಈಗಿನ ಸಂಘರ್ಷ ಉಭಯ ದೇಶಗಳ ನಡುವಣ ಆರ್ಥಿಕ ಸಂಬಂಧವನ್ನು ನಿಷ್ಕ್ರಿಯಗೊಳಿಸದಂತೆ ನೋಡಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>