<p><strong>ಬೆಂಗಳೂರು:</strong> ‘ಯಾವುದೇ ಉದ್ಯಮದ ಜೊತೆಗೆ ಸರ್ಕಾರ, ಬ್ಯಾಂಕ್ ಕೂಡ ಪಾಲುದಾರರಂತಿರುತ್ತವೆ. ಆದರೆ, ಈ ಅಂಶಗಳೇ ಉದ್ಯಮಗಳನ್ನು ನಿರ್ದೇಶಿಸುವ ಬದಲು, ಉದ್ಯಮಗಳು ತಮ್ಮದೇ ಆದ ನಿಯಮಗಳನ್ನು ರೂಪಿಸಿಕೊಳ್ಳಬೇಕು, ಪ್ರಗತಿಯನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಸಲಹೆ ನೀಡಿದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ವತಿಯಿಂದ ಬುಧವಾರ ಪೊಲೀಸ್ ಸಿಬ್ಬಂದಿಗೆ ₹10 ಲಕ್ಷ ಮೌಲ್ಯದ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಣ್ಣ ಉದ್ಯಮಗಳೆಂದರೆ ಕುದುರೆ ಸವಾರನಿದ್ದಂತೆ. ನೀವು ಕುದುರೆಯನ್ನು ನಿಯಂತ್ರಿಸಬೇಕೇ ವಿನಾ, ನಿಮ್ಮನ್ನು ನಿಯಂತ್ರಿಸಲು ಕುದುರೆಗೆ ಅವಕಾಶ ನೀಡಬಾರದು’ ಎಂದರು.</p>.<p>‘ಸುಮಾರು 25 ವರ್ಷಗಳ ಹಿಂದೆ ಸಣ್ಣ ಕೈಗಾರಿಕೆಗಳು ಎದುರಿಸುತ್ತಿದ್ದ ಸಮಸ್ಯೆಗಳು, ಈಗ ಎದುರಿಸುತ್ತಿರುವ ಸಮಸ್ಯೆಗಳು ಒಂದೇ ಆಗಿವೆ. ಆದರೆ, ಈಗ ಈ ಸಮಸ್ಯೆಗಳು ಎದ್ದು ಕಾಣುತ್ತಿವೆ. ಇದರಿಂದ ಹೊರಬರಲುಸಣ್ಣ ಕೈಗಾರಿಕೆಗಳು ತಮ್ಮ ಬೌದ್ಧಿಕ ಆಸ್ತಿಯನ್ನು ಹೆಚ್ಚಿಸುವ ಮತ್ತು ಸೃಷ್ಟಿಸುವ ಅಗತ್ಯವಿದೆ’ ಎಂದರು.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ, ‘ಲಾಕ್ಡೌನ್ ಸಂದರ್ಭದಲ್ಲಿ ಸಣ್ಣ ಕೈಗಾರಿಕೆಗಳಿಗೆ ಪೊಲೀಸರು ಬೆಂಬಲ ನೀಡಿದರು. ಇದರಿಂದ ಲಾಕ್ಡೌನ್ ನಂತರ, ಉದ್ಯಮದ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ತುಂಬಾ ಸಹಾಯವಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಯಾವುದೇ ಉದ್ಯಮದ ಜೊತೆಗೆ ಸರ್ಕಾರ, ಬ್ಯಾಂಕ್ ಕೂಡ ಪಾಲುದಾರರಂತಿರುತ್ತವೆ. ಆದರೆ, ಈ ಅಂಶಗಳೇ ಉದ್ಯಮಗಳನ್ನು ನಿರ್ದೇಶಿಸುವ ಬದಲು, ಉದ್ಯಮಗಳು ತಮ್ಮದೇ ಆದ ನಿಯಮಗಳನ್ನು ರೂಪಿಸಿಕೊಳ್ಳಬೇಕು, ಪ್ರಗತಿಯನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್ ಸಲಹೆ ನೀಡಿದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ವತಿಯಿಂದ ಬುಧವಾರ ಪೊಲೀಸ್ ಸಿಬ್ಬಂದಿಗೆ ₹10 ಲಕ್ಷ ಮೌಲ್ಯದ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಣ್ಣ ಉದ್ಯಮಗಳೆಂದರೆ ಕುದುರೆ ಸವಾರನಿದ್ದಂತೆ. ನೀವು ಕುದುರೆಯನ್ನು ನಿಯಂತ್ರಿಸಬೇಕೇ ವಿನಾ, ನಿಮ್ಮನ್ನು ನಿಯಂತ್ರಿಸಲು ಕುದುರೆಗೆ ಅವಕಾಶ ನೀಡಬಾರದು’ ಎಂದರು.</p>.<p>‘ಸುಮಾರು 25 ವರ್ಷಗಳ ಹಿಂದೆ ಸಣ್ಣ ಕೈಗಾರಿಕೆಗಳು ಎದುರಿಸುತ್ತಿದ್ದ ಸಮಸ್ಯೆಗಳು, ಈಗ ಎದುರಿಸುತ್ತಿರುವ ಸಮಸ್ಯೆಗಳು ಒಂದೇ ಆಗಿವೆ. ಆದರೆ, ಈಗ ಈ ಸಮಸ್ಯೆಗಳು ಎದ್ದು ಕಾಣುತ್ತಿವೆ. ಇದರಿಂದ ಹೊರಬರಲುಸಣ್ಣ ಕೈಗಾರಿಕೆಗಳು ತಮ್ಮ ಬೌದ್ಧಿಕ ಆಸ್ತಿಯನ್ನು ಹೆಚ್ಚಿಸುವ ಮತ್ತು ಸೃಷ್ಟಿಸುವ ಅಗತ್ಯವಿದೆ’ ಎಂದರು.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ, ‘ಲಾಕ್ಡೌನ್ ಸಂದರ್ಭದಲ್ಲಿ ಸಣ್ಣ ಕೈಗಾರಿಕೆಗಳಿಗೆ ಪೊಲೀಸರು ಬೆಂಬಲ ನೀಡಿದರು. ಇದರಿಂದ ಲಾಕ್ಡೌನ್ ನಂತರ, ಉದ್ಯಮದ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ತುಂಬಾ ಸಹಾಯವಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>