<p><strong>ಬೆಂಗಳೂರು:</strong> ‘ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಮೂಲಕವೇ ಸಮ್ಮತಿ ಮೇಳ ಆಯೋಜಿಸಲಾಗುವುದು’ ಎಂದು ಕೆಎಸ್ಪಿಸಿಬಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಹೇಳಿದರು.</p>.<p>ಮಾಲಿನ್ಯ ನಿಯಂತ್ರಣಾ ಮಂಡಳಿ ಕಾರ್ಯವಿಧಾನ ಸುಗಮಗೊಳಿಸುವ ನಿಟ್ಟಿನಲ್ಲಿರಾಜ್ಯ ಸಣ್ಣ ಕೈಗಾರಿಕೆಗಳ ಸಂಘವು (ಕಾಸಿಯಾ) ಗುರುವಾರ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯಂತೆ ಕೈಗಾರಿಕೆಗಳು ಕೂಡ ಭಾರತದ ಆರ್ಥಿಕತೆಯ ಬೆನ್ನೆಲುಬು. ಕಾಸಿಯಾ ಸದಸ್ಯತ್ವ ಪಡೆದ 6.50 ಲಕ್ಷ ಕೈಗಾರಿಕೆಗಳಿದ್ದರೂ ಮಂಡಳಿಯಲ್ಲಿ ಒಂದು ಲಕ್ಷ ಮಾತ್ರ ನೊಂದಾಯಿಸಿಕೊಂಡಿದ್ದಾರೆ.ಸಮಸ್ಯೆ ಬಗೆಹರಿಸಿಕೊಳ್ಳಲು ಕೈಗಾರಿಕೆಗಳು ಮುಂದೆ ಬರಬೇಕು. ಸಹಕಾರ ನೀಡಲು ಮಂಡಳಿ ಸದಾ ಸಿದ್ಧವಿದೆ’ ಎಂದರು.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ, ಸಂಸ್ಥೆಯ ಪರಿಸರ ಮತ್ತು ಪರಿಸರ ವಿಜ್ಞಾನ ಸಮಿತಿಯ ಅಧ್ಯಕ್ಷ ಎಚ್.ಕೆ.ಮಲ್ಲೇಶಗೌಡ ಅವರು ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಮೂಲಕವೇ ಸಮ್ಮತಿ ಮೇಳ ಆಯೋಜಿಸಲಾಗುವುದು’ ಎಂದು ಕೆಎಸ್ಪಿಸಿಬಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಹೇಳಿದರು.</p>.<p>ಮಾಲಿನ್ಯ ನಿಯಂತ್ರಣಾ ಮಂಡಳಿ ಕಾರ್ಯವಿಧಾನ ಸುಗಮಗೊಳಿಸುವ ನಿಟ್ಟಿನಲ್ಲಿರಾಜ್ಯ ಸಣ್ಣ ಕೈಗಾರಿಕೆಗಳ ಸಂಘವು (ಕಾಸಿಯಾ) ಗುರುವಾರ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ಕೃಷಿಯಂತೆ ಕೈಗಾರಿಕೆಗಳು ಕೂಡ ಭಾರತದ ಆರ್ಥಿಕತೆಯ ಬೆನ್ನೆಲುಬು. ಕಾಸಿಯಾ ಸದಸ್ಯತ್ವ ಪಡೆದ 6.50 ಲಕ್ಷ ಕೈಗಾರಿಕೆಗಳಿದ್ದರೂ ಮಂಡಳಿಯಲ್ಲಿ ಒಂದು ಲಕ್ಷ ಮಾತ್ರ ನೊಂದಾಯಿಸಿಕೊಂಡಿದ್ದಾರೆ.ಸಮಸ್ಯೆ ಬಗೆಹರಿಸಿಕೊಳ್ಳಲು ಕೈಗಾರಿಕೆಗಳು ಮುಂದೆ ಬರಬೇಕು. ಸಹಕಾರ ನೀಡಲು ಮಂಡಳಿ ಸದಾ ಸಿದ್ಧವಿದೆ’ ಎಂದರು.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ, ಸಂಸ್ಥೆಯ ಪರಿಸರ ಮತ್ತು ಪರಿಸರ ವಿಜ್ಞಾನ ಸಮಿತಿಯ ಅಧ್ಯಕ್ಷ ಎಚ್.ಕೆ.ಮಲ್ಲೇಶಗೌಡ ಅವರು ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>