<p><strong>ಬೆಂಗಳೂರು:</strong> ಲಿಖಿತ ಪರೀಕ್ಷೆಯಲ್ಲಿ ನಕಲು ಹಾಗೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಅಕ್ರಮಕ್ಕೆ ಸಂಬಂಧಿಸಿ 61 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು (ಎಪಿಪಿ) ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಎತ್ತಿಹಿಡಿದಿದೆ.</p>.<p>ಈ ಸಂಬಂಧ ಕುಮುದಿನಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ಎನ್. ಶಿವಶೈಲಂ ಅವರನ್ನು ಒಳಗೊಂಡ ನ್ಯಾಯಪೀಠ ಈ ಕುರಿತ ಆದೇಶ ಪ್ರಕಟಿಸಿದೆ. ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಜಿ.ರಮೇಶ್ ನಾಯಕ್, 'ಈಗಾಗಲೇ ಅರ್ಜಿದಾರರ ವಿರುದ್ಧದ ಆರೋಪಗಳು ತನಿಖೆಯಲ್ಲಿ ದೃಢಪಟ್ಟಿವೆ. ಹಾಗಾಗಿಯೇ ಸರ್ಕಾರ ಅಮಾನತು ನಿರ್ಧಾರ ಕೈಗೊಂಡಿದೆ' ಎಂದು ವಿವರಿಸಿದ್ದರು.</p>.<p>ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, 'ಈ ಪ್ರಕರಣದಲ್ಲಿ ವ್ಯಾಪಕ ಅಕ್ರಮಗಳ ಆರೋಪ ಇರುವ ಕಾರಣ ಸರ್ಕಾರ ಕೈಗೊಂಡಿರುವ ನಿರ್ಧಾರ ಸರಿ ಇದೆ. ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ' ಎಂದು ಹೇಳಿದೆ.</p>.<p>ಪಿಐಎಲ್: '192 ಎಪಿಪಿಗಳ ನೇಮಕ ಅಕ್ರಮದಲ್ಲಿ 61 ಅಭ್ಯರ್ಥಿಗಳು ಕಳಂಕಿತರು ಎಂದು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ. ಆದರೆ, ಈ ವರದಿ ಆಧರಿಸಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಕ್ಷೇಪಿಸಿ ವಕೀಲ ಎಸ್. ಉಮಾಪತಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.</p>.<p>ಹೈಕೋರ್ಟ್ ನಿರ್ದೇಶನದ ಮೇರೆಗೆ ಕಳಂಕಿತ 61 ಎಪಿಪಿಗಳನ್ನು ರಾಜ್ಯ ಪ್ರಾಸಿಕ್ಯೂಷನ್ ಇಲಾಖೆ 2020ರ ಮಾರ್ಚ್ 20ರಂದು ಅಮಾನತುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಿಖಿತ ಪರೀಕ್ಷೆಯಲ್ಲಿ ನಕಲು ಹಾಗೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಅಕ್ರಮಕ್ಕೆ ಸಂಬಂಧಿಸಿ 61 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು (ಎಪಿಪಿ) ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಎತ್ತಿಹಿಡಿದಿದೆ.</p>.<p>ಈ ಸಂಬಂಧ ಕುಮುದಿನಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ಎನ್. ಶಿವಶೈಲಂ ಅವರನ್ನು ಒಳಗೊಂಡ ನ್ಯಾಯಪೀಠ ಈ ಕುರಿತ ಆದೇಶ ಪ್ರಕಟಿಸಿದೆ. ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಜಿ.ರಮೇಶ್ ನಾಯಕ್, 'ಈಗಾಗಲೇ ಅರ್ಜಿದಾರರ ವಿರುದ್ಧದ ಆರೋಪಗಳು ತನಿಖೆಯಲ್ಲಿ ದೃಢಪಟ್ಟಿವೆ. ಹಾಗಾಗಿಯೇ ಸರ್ಕಾರ ಅಮಾನತು ನಿರ್ಧಾರ ಕೈಗೊಂಡಿದೆ' ಎಂದು ವಿವರಿಸಿದ್ದರು.</p>.<p>ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, 'ಈ ಪ್ರಕರಣದಲ್ಲಿ ವ್ಯಾಪಕ ಅಕ್ರಮಗಳ ಆರೋಪ ಇರುವ ಕಾರಣ ಸರ್ಕಾರ ಕೈಗೊಂಡಿರುವ ನಿರ್ಧಾರ ಸರಿ ಇದೆ. ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ' ಎಂದು ಹೇಳಿದೆ.</p>.<p>ಪಿಐಎಲ್: '192 ಎಪಿಪಿಗಳ ನೇಮಕ ಅಕ್ರಮದಲ್ಲಿ 61 ಅಭ್ಯರ್ಥಿಗಳು ಕಳಂಕಿತರು ಎಂದು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ. ಆದರೆ, ಈ ವರದಿ ಆಧರಿಸಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಕ್ಷೇಪಿಸಿ ವಕೀಲ ಎಸ್. ಉಮಾಪತಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.</p>.<p>ಹೈಕೋರ್ಟ್ ನಿರ್ದೇಶನದ ಮೇರೆಗೆ ಕಳಂಕಿತ 61 ಎಪಿಪಿಗಳನ್ನು ರಾಜ್ಯ ಪ್ರಾಸಿಕ್ಯೂಷನ್ ಇಲಾಖೆ 2020ರ ಮಾರ್ಚ್ 20ರಂದು ಅಮಾನತುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>