ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ನ 2021-22ನೇ ಸಾಲಿನ ಕಾವ್ಯಾನಂದ ಪುರಸ್ಕಾರಕ್ಕೆ ಜ.ನಾ. ತೇಜಶ್ರೀ ಅವರ ‘ಯಕ್ಷಿಣಿ ಕನ್ನಡಿ’ ಕೃತಿ ಆಯ್ಕೆಯಾಗಿದೆ.
ಡಾ. ಸಿದ್ಧಯ್ಯ ಪುರಾಣಿಕ ಅವರ ಕಾವ್ಯನಾಮ ಕಾವ್ಯಾನಂದ ಹೆಸರಿನಲ್ಲಿ ನೀಡಲಾಗುವ ಈ ಪುರಸ್ಕಾರವು ₹ 50,000 (ಐವತ್ತು ಸಾವಿರ ರೂಪಾಯಿ) ನಗದು ಹಾಗು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಡಿಸೆಂಬರ್ 31ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷೆ ವಿಜಯಾ ನಂದೀಶ್ವರ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.