ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುರುಪಾದ ಮರಿಗುದ್ದಿ ಅವರ ಕೃತಿಗೆ ‘ಕಾವ್ಯಾನಂದ ಪುರಸ್ಕಾರ’

Last Updated 30 ನವೆಂಬರ್ 2022, 15:59 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ ವತಿಯಿಂದ ನೀಡಲಾಗುವ 2019–20 ‘ಕಾವ್ಯಾನಂದ ಪುರಸ್ಕಾರ’ವು ಗುರುಪಾದ ಮರಿಗುದ್ದಿ ಅವರ ‘ಪೊದೆಯಿಂದಿಳಿದ ಎದೆಯ ಹಕ್ಕಿ’ ಕೃತಿಗೆ ದೊರೆತಿದೆ.

ಡಾ.ಸಿದ್ಧಯ್ಯ ಪುರಾಣಿಕರ ಕಾವ್ಯನಾಮವಾಗಿರುವ ‘ಕಾವ್ಯಾನಂದ’ ಹೆಸರಿನಲ್ಲಿ ನೀಡಲಾಗುವ ಪುರಸ್ಕಾರವು ₹50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

2023ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್‌ ಅಧ್ಯಕ್ಷರಾದ ವಿಜಯಾ ನಂದೀಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT