<p><strong>ಬೆಂಗಳೂರು:</strong> ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ಪರೀಕ್ಷಾ ಯಂತ್ರಕ್ಕೆ (ಸಿಬಿಎನ್ಎಎಟಿ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.</p>.<p>ಸಿಂಜೆಂಟ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಲ್ಲಿ ₹ 1.5 ಕೋಟಿ ಮೊತ್ತದಲ್ಲಿ 7 ಯಂತ್ರಗಳನ್ನು ನೀಡಿದೆ. 3 ಯಂತ್ರಗಳನ್ನು ವಿಜಯನಗರ ಜಿಲ್ಲೆಗೆ, 3 ಯಂತ್ರಗಳನ್ನು ಕೋಲಾರ ಜಿಲ್ಲೆಗೆ ನೀಡಲಾಗಿದ್ದು, ಒಂದನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>‘ನಿಖರ ಫಲಿತಾಂಶ ನೀಡುವ ಈ ಯಂತ್ರಗಳಿಂದ ಕ್ಷಯ ರೋಗವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯ. ಮೈಕ್ರೋಸ್ಕೋಪಿಕ್ ಪರೀಕ್ಷೆಯಲ್ಲಿ ಕೆಲವೊಮ್ಮೆ ಆರಂಭಿಕ ಹಂತದಲ್ಲಿ ರೊಗ ಪತ್ತೆ ಸಾಧ್ಯವಾಗದೆ ರೋಗಿಗೆ ಸಮಸ್ಯೆ ಆಗುತ್ತಿತ್ತು. ಈ ವಿಧಾನದಲ್ಲಿ 10,000 ಎಂಎಲ್ ಬೆಸಿಲಿಯನ್ ಇದ್ದರೆ ಮಾತ್ರ ರೋಗವನ್ನು ಗುರುತಿಸಬಹುದು. ಅದಕ್ಕೂ ಕಡಿಮೆ ಇದ್ದಾಗ ಗುರುತಿಸುವುದು ಕಷ್ಟ ಆಗುತ್ತಿತ್ತು. ಸಿಬಿಎನ್ಎಎಟಿಯಲ್ಲಿ 137ಎಂಎಲ್ ಇದ್ದಾಗಲೂ ಪತ್ತೆ ಹಚ್ಚಬಹುದಾಗಿದೆ. ಕೇವಲ 90 ನಿಮಿಷದಲ್ಲಿ ಕ್ಷಯ ರೋಗಾಣು ಪತ್ತೆ ಹಚ್ಚಲು ಸಾಧ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ಪರೀಕ್ಷಾ ಯಂತ್ರಕ್ಕೆ (ಸಿಬಿಎನ್ಎಎಟಿ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.</p>.<p>ಸಿಂಜೆಂಟ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಲ್ಲಿ ₹ 1.5 ಕೋಟಿ ಮೊತ್ತದಲ್ಲಿ 7 ಯಂತ್ರಗಳನ್ನು ನೀಡಿದೆ. 3 ಯಂತ್ರಗಳನ್ನು ವಿಜಯನಗರ ಜಿಲ್ಲೆಗೆ, 3 ಯಂತ್ರಗಳನ್ನು ಕೋಲಾರ ಜಿಲ್ಲೆಗೆ ನೀಡಲಾಗಿದ್ದು, ಒಂದನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>‘ನಿಖರ ಫಲಿತಾಂಶ ನೀಡುವ ಈ ಯಂತ್ರಗಳಿಂದ ಕ್ಷಯ ರೋಗವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯ. ಮೈಕ್ರೋಸ್ಕೋಪಿಕ್ ಪರೀಕ್ಷೆಯಲ್ಲಿ ಕೆಲವೊಮ್ಮೆ ಆರಂಭಿಕ ಹಂತದಲ್ಲಿ ರೊಗ ಪತ್ತೆ ಸಾಧ್ಯವಾಗದೆ ರೋಗಿಗೆ ಸಮಸ್ಯೆ ಆಗುತ್ತಿತ್ತು. ಈ ವಿಧಾನದಲ್ಲಿ 10,000 ಎಂಎಲ್ ಬೆಸಿಲಿಯನ್ ಇದ್ದರೆ ಮಾತ್ರ ರೋಗವನ್ನು ಗುರುತಿಸಬಹುದು. ಅದಕ್ಕೂ ಕಡಿಮೆ ಇದ್ದಾಗ ಗುರುತಿಸುವುದು ಕಷ್ಟ ಆಗುತ್ತಿತ್ತು. ಸಿಬಿಎನ್ಎಎಟಿಯಲ್ಲಿ 137ಎಂಎಲ್ ಇದ್ದಾಗಲೂ ಪತ್ತೆ ಹಚ್ಚಬಹುದಾಗಿದೆ. ಕೇವಲ 90 ನಿಮಿಷದಲ್ಲಿ ಕ್ಷಯ ರೋಗಾಣು ಪತ್ತೆ ಹಚ್ಚಲು ಸಾಧ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>