<p><strong>ಬೆಂಗಳೂರು</strong>: ‘ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹ 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<p>ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಟ್ರಾಮಾ ಸೆಂಟರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ‘₹ 200 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುವ ಮೂಲಕ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಕ್ರಮವಹಿಸಲಾಗುವುದು’ ಎಂದು ಹೇಳಿದರು.</p>.<p>ಆಸ್ಪತ್ರೆ ಆವರಣದಲ್ಲಿ ₹ 35 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 50 ಹಾಸಿಗೆಗಳ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಪರಿಶೀಲಿಸಿ, ಮುಂಬರುವ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿನ ತುರ್ತು ನಿಗಾ ಘಟಕವನ್ನು ನೂತನವಾಗಿ ನಿರ್ಮಾಣಗೊಳ್ಳಲಿರುವ ಟ್ರಾಮಾಕೇರ್ ಸೆಂಟರ್ಗೆ ಸ್ಥಳಾಂತರಿಸುವ ಬಗ್ಗೆಯೂ ಚರ್ಚಿಸಿದರು.</p>.<p>‘ಆಸ್ಪತ್ರೆ ಆವರಣದಲ್ಲಿ ₹ 66.78 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಇದರ ಶಂಕುಸ್ಥಾಪನೆ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಔಷಧಕ್ಕಾಗಿ ಹೊರಗೆ ಹೋಗುವ ಸ್ಥಿತಿ ತಪ್ಪಬೇಕು. ಹಾಗಾಗಿ, ಆಸ್ಪತ್ರೆ ಆವರಣದಲ್ಲಿರುವ ಖಾಸಗಿ ಔಷಧಾಲಯಗಳಿಗೆ ಗೇಟ್ ಪಾಸ್ ನೀಡಿ, ಸರ್ಕಾರಿ ಔಷಧಾಲಯವನ್ನೇ ಮಧ್ಯರಾತ್ರಿವರೆಗೂ ತೆರೆಯಲು ಸಿಬ್ಬಂದಿ ನೇಮಕ ಸೇರಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಹೃದಯಾಘಾತ ಸೇರಿ ಹೃದಯ ಸಂಬಂಧಿ ಸಮಸ್ಯೆಗೆ ಬರುವವರಿಗೆ ತುರ್ತು ಚಿಕಿತ್ಸೆ ನೀಡಲು ಸ್ಥಾಪಿಸಿರುವ ಜಯದೇವ ಹೃದ್ರೋಗ ಘಟಕವು ರಾತ್ರಿ 10 ಗಂಟೆಯವರೆಗೂ ಕಾರ್ಯನಿರ್ವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಇಂದರಾ ಕಬಾಡೆ, ಸ್ಥಾನಿಕ ವೈದ್ಯಾಧಿಕಾರಿ ಡಾ. ಮೋಹನ್ ಸೇರಿ ಇಲಾಖೆ ಹಾಗೂ ಆಸ್ಪತ್ರೆಯ ಅಧಿಕಾರಿಗಳು ಉಪಸ್ಥಿತರಿದ್ದರು.<br><br></p>.<p> ಆಸ್ಪತ್ರೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳು</p><p>। ₹ 38.28 ಕೋಟಿ ವೆಚ್ಚದಲ್ಲಿ ಬೋಧಕ ವಿಭಾಗ ಕಟ್ಟಡ ನಿರ್ಮಾಣ । ₹ 4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ ನಿರ್ಮಾಣ । ₹ 4.80 ಕೋಟಿ ವೆಚ್ಚದಲ್ಲಿ ಅಗ್ನಿ ಶಾಮಕ ವ್ಯವಸ್ಥೆ । ₹ 2 ಕೋಟಿ ವೆಚ್ಚದಲ್ಲಿ ಲಾಂಡ್ರಿ ವ್ಯವಸ್ಥೆ । ₹ 38 ಲಕ್ಷ ವೆಚ್ಚದಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ಘಟಕ । ಮುರಿದು ಬಿದ್ದಿರುವ ಆರ್ಸಿಸಿ ಸಜ್ಜಾಗಳ ಮರು ನಿರ್ಮಾಣ ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆ ಸೇರಿ ಆಸ್ಪತ್ರೆಯ ಹಳೆಯ ಕಟ್ಟಡಗಳ ದುರಸ್ತಿಗಾಗಿ ಸರ್ಕಾರಕ್ಕೆ ₹ 9.98 ಕೋಟಿ ವೆಚ್ಚದ ಪ್ರಸ್ತಾವನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ₹ 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<p>ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಟ್ರಾಮಾ ಸೆಂಟರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ‘₹ 200 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುವ ಮೂಲಕ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಕ್ರಮವಹಿಸಲಾಗುವುದು’ ಎಂದು ಹೇಳಿದರು.</p>.<p>ಆಸ್ಪತ್ರೆ ಆವರಣದಲ್ಲಿ ₹ 35 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 50 ಹಾಸಿಗೆಗಳ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಪರಿಶೀಲಿಸಿ, ಮುಂಬರುವ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿನ ತುರ್ತು ನಿಗಾ ಘಟಕವನ್ನು ನೂತನವಾಗಿ ನಿರ್ಮಾಣಗೊಳ್ಳಲಿರುವ ಟ್ರಾಮಾಕೇರ್ ಸೆಂಟರ್ಗೆ ಸ್ಥಳಾಂತರಿಸುವ ಬಗ್ಗೆಯೂ ಚರ್ಚಿಸಿದರು.</p>.<p>‘ಆಸ್ಪತ್ರೆ ಆವರಣದಲ್ಲಿ ₹ 66.78 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಇದರ ಶಂಕುಸ್ಥಾಪನೆ ಕಾರ್ಯಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಔಷಧಕ್ಕಾಗಿ ಹೊರಗೆ ಹೋಗುವ ಸ್ಥಿತಿ ತಪ್ಪಬೇಕು. ಹಾಗಾಗಿ, ಆಸ್ಪತ್ರೆ ಆವರಣದಲ್ಲಿರುವ ಖಾಸಗಿ ಔಷಧಾಲಯಗಳಿಗೆ ಗೇಟ್ ಪಾಸ್ ನೀಡಿ, ಸರ್ಕಾರಿ ಔಷಧಾಲಯವನ್ನೇ ಮಧ್ಯರಾತ್ರಿವರೆಗೂ ತೆರೆಯಲು ಸಿಬ್ಬಂದಿ ನೇಮಕ ಸೇರಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಹೃದಯಾಘಾತ ಸೇರಿ ಹೃದಯ ಸಂಬಂಧಿ ಸಮಸ್ಯೆಗೆ ಬರುವವರಿಗೆ ತುರ್ತು ಚಿಕಿತ್ಸೆ ನೀಡಲು ಸ್ಥಾಪಿಸಿರುವ ಜಯದೇವ ಹೃದ್ರೋಗ ಘಟಕವು ರಾತ್ರಿ 10 ಗಂಟೆಯವರೆಗೂ ಕಾರ್ಯನಿರ್ವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಇಂದರಾ ಕಬಾಡೆ, ಸ್ಥಾನಿಕ ವೈದ್ಯಾಧಿಕಾರಿ ಡಾ. ಮೋಹನ್ ಸೇರಿ ಇಲಾಖೆ ಹಾಗೂ ಆಸ್ಪತ್ರೆಯ ಅಧಿಕಾರಿಗಳು ಉಪಸ್ಥಿತರಿದ್ದರು.<br><br></p>.<p> ಆಸ್ಪತ್ರೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳು</p><p>। ₹ 38.28 ಕೋಟಿ ವೆಚ್ಚದಲ್ಲಿ ಬೋಧಕ ವಿಭಾಗ ಕಟ್ಟಡ ನಿರ್ಮಾಣ । ₹ 4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ ನಿರ್ಮಾಣ । ₹ 4.80 ಕೋಟಿ ವೆಚ್ಚದಲ್ಲಿ ಅಗ್ನಿ ಶಾಮಕ ವ್ಯವಸ್ಥೆ । ₹ 2 ಕೋಟಿ ವೆಚ್ಚದಲ್ಲಿ ಲಾಂಡ್ರಿ ವ್ಯವಸ್ಥೆ । ₹ 38 ಲಕ್ಷ ವೆಚ್ಚದಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ಘಟಕ । ಮುರಿದು ಬಿದ್ದಿರುವ ಆರ್ಸಿಸಿ ಸಜ್ಜಾಗಳ ಮರು ನಿರ್ಮಾಣ ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆ ಸೇರಿ ಆಸ್ಪತ್ರೆಯ ಹಳೆಯ ಕಟ್ಟಡಗಳ ದುರಸ್ತಿಗಾಗಿ ಸರ್ಕಾರಕ್ಕೆ ₹ 9.98 ಕೋಟಿ ವೆಚ್ಚದ ಪ್ರಸ್ತಾವನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>