‘ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಕೆಇಬಿ ವೃತ್ತದ ಬಳಿ ಸಣ್ಣ ಮಳೆಗೂ ಎರಡು ಅಡಿಗಳಷ್ಟು ನೀರು ನಿಲ್ಲುತ್ತಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತೆ ಆಗಿದೆ. ನೀರು ತುಂಬಿಕೊಂಡಿರುವುದರಿಂದ ಹೊಂಡಗಳು ಕಾಣುತ್ತಿಲ್ಲ. ಬಹಳಷ್ಟು ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದಾರೆ’ ಎನ್ನುವುದು ಸ್ಥಳೀಯ ಅಂಗಡಿಯೊಂದರ ಮಾಲೀಕ ರಾಜಣ್ಣ ಅವರ
ಮಾತು.