ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪನ್ಯಾಸಕ ಹುದ್ದೆಯ ಆಕಾಂಕ್ಷಿ ಅರ್ಜುನ್, ‘ಕೆಇಎ ಸಲ್ಲಿಸಿರುವ ವರದಿಯಲ್ಲಿ ಅನೇಕ ಸುಳ್ಳುಗಳಿವೆ. ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಅಭ್ಯರ್ಥಿಗಳು ಮೇ ತಿಂಗಳಲ್ಲಿದೂರು ದಾಖಲಿಸಿದ್ದು, ನ್ಯಾಯಾಲಯಎಲ್ಲ ಪ್ರಕರಣಗಳನ್ನು ಮುಕ್ತಾಯಗೊಳಿಸಿರುವುದಾಗಿ ಸಚಿವರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಎಲ್ಲ ಪ್ರಕರಣಗಳು ವಿಚಾರಣೆ ಹಂತದಲ್ಲೇ ಇವೆ. ಈ ಬಗ್ಗೆ ಕೆಇಎಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ನೋಟಿಸ್ ನೀಡಿದೆ. ಈ ಸಂಬಂಧ ಕೆಇಎ ತನ್ನ ವೆಬ್ಸೈಟ್ನಲ್ಲಿ ದೂರಿನ ಸಂಖ್ಯೆಗಳನ್ನು ಪ್ರಕಟಿಸಿದೆ’ ಎಂದರು.