ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೌಚಾಲಯವೂ ಸ್ವಚ್ಛವಾಗಿರಲಿ’

Last Updated 19 ಜೂನ್ 2020, 23:02 IST
ಅಕ್ಷರ ಗಾತ್ರ

ಬೆಂಗಳೂರು: 'ಗಾಂಧೀಜಿ ಕಂಡ ಗ್ರಾಮೀಣಾಭಿವೃದ್ಧಿ ಕನಸು ನನಸಾಗಬೇಕಾದರೆ, ನಾವು ಮಲಗುವ ಕೋಣೆಯ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶೌಚಾಲಯಗಳಲ್ಲೂ ಸ್ವಚ್ಛತೆ ಕಾಪಾಡಬೇಕು' ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ತಿಳಿಸಿದರು.

ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಎನ್‍ಎಸ್‍ಎಸ್ ಕೋಶ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಪರಿಷತ್‌ (ಎಂಜಿಎನ್‌ಸಿಆರ್‌ಇ) ಸಹಯೋಗದಲ್ಲಿ 'ಸ್ವಚ್ಛತಾ ಹಾಗೂ ಜಲ ಸಂರಕ್ಷಣೆ' ಕುರಿತು ಹಮ್ಮಿಕೊಂಡಿದ್ದ ಆನ್‍ಲೈನ್ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಎಂಜಿಎನ್‌ಸಿಆರ್‌ಇ ಯೋಜನಾ ನಿರ್ದೇಶಕ ಬಿ.ದಿವಾಕರ್, ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ. ಎನ್.ಸತೀಶ್ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT