ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಜುಲೈ 28ರಂದು ಸಮಾರಂಭ ಆಯೋಜಿಸುವ ಯೋಜನೆ ಇತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜುಲೈ 26 ಅಥವಾ 27ರಂದು ನಗರಕ್ಕೆ ಬರುವ ಯೋಜನೆ ಇದೆ. ಹೀಗಾಗಿ, ಸಮಾರಂಭವನ್ನು ಮುಂದೂಡಲಾಗಿದೆ. ಆಗಸ್ಟ್ 4 ಅಥವಾ 5ರಂದು ಪ್ರಶಸ್ತಿ ಪ್ರದಾನ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ. ಈ ಸಮಿತಿ ಸಭೆ ನಡೆಸಿ, ಅರ್ಹತೆ ಆಧಾರದ ಮೇಲೆ ಬಹುತೇಕ ಪಟ್ಟಿಯನ್ನು ಅಂತಿಮಗೊಳಿಸಿದೆ.