<p><strong>ಕೆಂಗೇರಿ</strong>: ‘ಪ್ರಾಥಮಿಕ ಶಾಲೆಯಿಂದ ಉನ್ನತ ಶಿಕ್ಷಣದವರೆಗಿನ ಪಠ್ಯ ಪುಸ್ತಕಗಳಲ್ಲಿ ಕೆಂಪೇಗೌಡರ ಕೊಡುಗೆಯನ್ನು ಪರಿಚಯಿಸುವ ಪಠ್ಯವಿರಬೇಕು. ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕೆಂಪೇಗೌಡರ ಭಾವಚಿತ್ರ ಪ್ರದರ್ಶಿಸಬೇಕು’ ಎಂದು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.</p>.<p>ಮಾಗಡಿ ರಸ್ತೆ ತಾವರೆಕೆರೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515ನೆಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ನಾಡಪ್ರಭು ಕೆಂಪೇಗೌಡರು ಕೇವಲ ಸಾಮಂತ ಅರಸರಂತೆ ಸೀಮಿತ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ನಾಡಿನ ಏಳ್ಗೆಗಾಗಿ ಕೆರೆ ಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಿದರು. ದೇಗುಲಗಳ ನಿರ್ಮಾಣ ಮಾಡಿದರು. ಸರ್ವ ಜನಾಂಗದವರಿಗೂ ಸ್ವಾಭಿಮಾನದಿಂದ ಬದುಕುವ ಅವಕಾಶ ಕಲ್ಪಿಸಿದರು‘ ಎಂದು ಹೇಳಿದರು. </p>.<p>ತಾವರೆಕೆರೆಯಲ್ಲಿ ಕೆಂಪೇಗೌಡರ ಬೃಹತ್ ಪುತ್ಥಳಿಯನ್ನು ನಿರ್ಮಿಸುವುದರ ಮೂಲಕ ಎಲ್ಲ ಸಮುದಾಯದವರು ಒಮ್ಮತದಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕು ಎಂದು ಸಲಹೆ ನೀಡಿದರು.</p>.<p>ತಾವರೆಕೆರೆ ಕಾಳಪ್ಪ ಸ್ವಾಮಿ ಮಠದ ರೇವಣಸಿದ್ದಯ್ಯ ಸ್ವಾಮೀಜಿ, ತಾವರೆಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮಸ್ಥರಾದ ಟಿ.ಎಲ್ ಚಂದ್ರಶೇಖರ್, ಶಂಕರೇಗೌಡ, ಟಿ.ಎ. ಮೂರ್ತಿ, ಗಂಗನರಸಯ್ಯ, ಶಿಕ್ಷಕ ಚಿಕ್ಕವೀರಯ್ಯ, ಲಕ್ಷ್ಮೀಶ್ ಗೌಡ, ವೆಂಕಟೇಶ್, ಎಸ್ಎಲ್ಎನ್ ನವೀನ್, ಕಾಂತರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಪ್ರಾಥಮಿಕ ಶಾಲೆಯಿಂದ ಉನ್ನತ ಶಿಕ್ಷಣದವರೆಗಿನ ಪಠ್ಯ ಪುಸ್ತಕಗಳಲ್ಲಿ ಕೆಂಪೇಗೌಡರ ಕೊಡುಗೆಯನ್ನು ಪರಿಚಯಿಸುವ ಪಠ್ಯವಿರಬೇಕು. ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕೆಂಪೇಗೌಡರ ಭಾವಚಿತ್ರ ಪ್ರದರ್ಶಿಸಬೇಕು’ ಎಂದು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.</p>.<p>ಮಾಗಡಿ ರಸ್ತೆ ತಾವರೆಕೆರೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515ನೆಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ನಾಡಪ್ರಭು ಕೆಂಪೇಗೌಡರು ಕೇವಲ ಸಾಮಂತ ಅರಸರಂತೆ ಸೀಮಿತ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ನಾಡಿನ ಏಳ್ಗೆಗಾಗಿ ಕೆರೆ ಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಿದರು. ದೇಗುಲಗಳ ನಿರ್ಮಾಣ ಮಾಡಿದರು. ಸರ್ವ ಜನಾಂಗದವರಿಗೂ ಸ್ವಾಭಿಮಾನದಿಂದ ಬದುಕುವ ಅವಕಾಶ ಕಲ್ಪಿಸಿದರು‘ ಎಂದು ಹೇಳಿದರು. </p>.<p>ತಾವರೆಕೆರೆಯಲ್ಲಿ ಕೆಂಪೇಗೌಡರ ಬೃಹತ್ ಪುತ್ಥಳಿಯನ್ನು ನಿರ್ಮಿಸುವುದರ ಮೂಲಕ ಎಲ್ಲ ಸಮುದಾಯದವರು ಒಮ್ಮತದಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕು ಎಂದು ಸಲಹೆ ನೀಡಿದರು.</p>.<p>ತಾವರೆಕೆರೆ ಕಾಳಪ್ಪ ಸ್ವಾಮಿ ಮಠದ ರೇವಣಸಿದ್ದಯ್ಯ ಸ್ವಾಮೀಜಿ, ತಾವರೆಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆಂಪೇಗೌಡ, ಗ್ರಾಮಸ್ಥರಾದ ಟಿ.ಎಲ್ ಚಂದ್ರಶೇಖರ್, ಶಂಕರೇಗೌಡ, ಟಿ.ಎ. ಮೂರ್ತಿ, ಗಂಗನರಸಯ್ಯ, ಶಿಕ್ಷಕ ಚಿಕ್ಕವೀರಯ್ಯ, ಲಕ್ಷ್ಮೀಶ್ ಗೌಡ, ವೆಂಕಟೇಶ್, ಎಸ್ಎಲ್ಎನ್ ನವೀನ್, ಕಾಂತರಾಜು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>