ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣ, ಶಿವಕುಮಾರ ಸ್ವಾಮೀಜಿ ಯೋಗ ಹಾಗೂ ಧ್ಯಾನ ಮಂದಿರ, ಬಯಲು ರಂಗಮಂದಿರ, ಪೌರಕಾರ್ಮಿಕರ ವಿಶ್ರಾಂತಿಗೃಹ, ವಿವಿಧೋದ್ದೇಶ ಕಟ್ಟಡ ನಿರ್ಮಾಣ, ಕೆಂಪೇಗೌಡ ಕೋಟೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ, ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಇವುಗಳನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಿದರು.