<p><strong>ರಾಜರಾಜೇಶ್ವರಿನಗರ: </strong>‘ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸು<br />ವಂತದ್ದು’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಪುಟ್ಟೇಗೌಡ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ದೊಡ್ಡಕಲ್ಲಸಂದ್ರ ಬಳಿಯ ನಾರಾಯಣನಗರದಲ್ಲಿ ಏರ್ಪಡಿಸಿದ್ದ 509ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು.</p>.<p>ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಡಿ.ಹನುಮಂತಯ್ಯ ಮಾತನಾಡಿ, ‘ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ<br />ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ: </strong>‘ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸು<br />ವಂತದ್ದು’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಪುಟ್ಟೇಗೌಡ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ದೊಡ್ಡಕಲ್ಲಸಂದ್ರ ಬಳಿಯ ನಾರಾಯಣನಗರದಲ್ಲಿ ಏರ್ಪಡಿಸಿದ್ದ 509ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು.</p>.<p>ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಡಿ.ಹನುಮಂತಯ್ಯ ಮಾತನಾಡಿ, ‘ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ<br />ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>