ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸರ್ಕಾರ ರೂಪಿಸಿದ ಪಠ್ಯವನ್ನು ಓದಿ, ಕಲಿತು, ಪರೀಕ್ಷೆ ಬರೆಯಬೇಕು. ಅಂತಹ ಪಠ್ಯ ರೂಪಿಸುವವರು ಎಡ, ಬಲ ಅಥವಾ ಇನ್ನಿತರ ಸಿದ್ಧಾಂತದ ಹಿಂಬಾಲಕರು ಆಗಿರಬಾರದು. ಸಮಚಿತ್ತದಿಂದ ಎಲ್ಲವನ್ನೂ ನೋಡುವ ಪ್ರಾಜ್ಞರಾಗಿರಬೇಕು. ಆಳವಾದ ಅಧ್ಯಯನಶೀಲತೆ ಹೊಂದಿದ ವ್ಯಕ್ತಿಗಳನ್ನು ಪಠ್ಯಕ್ರಮ ರೂಪಿಸಲು ನೇಮಿಸಬೇಕು ಎಂದು ಹೇಳಿದರು.