<p><strong>ಬೆಂಗಳೂರು: </strong>ಇದೇ 2ರಂದು ನಡೆಯಬೇಕಾಗಿದ್ದ ನಾಡಪ್ರಭು ಕೆಂಪೇಗೌಡ ದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದ ಶೋಕಾಚರಣೆ ಸಲುವಾಗಿ ಬಿಬಿಎಂಪಿ ಮುಂದೂಡಿದೆ.</p>.<p>ಈ ಸಾಲಿನ ಕೆಂಪೇಗೌಡ ಜಯಂತಿ ಮುಂದೂಡಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಸಾಲಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ದಿನವೇ (ಏ.08) ಈ ಕಾರ್ಯಕ್ರಮವನ್ನು ಏರ್ಪಡಿಸಲು ಬಿಬಿಎಂಪಿ ನಿರ್ಧರಿಸಿತ್ತು. ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಯಾಗಿದ್ದರಿಂದ ಈ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.</p>.<p>ಸೆ.5ರಂದು ನಡೆಯಬೇಕಿದ್ದ ಪಾಲಿಕೆ ಕೌನ್ಸಿಲ್ ಸಭೆಯನ್ನೂ ಕೂಡ ಶೋಕಾಚರಣೆಯ ಕಾರಣಕ್ಕೆ ಮುಂದೂಡಲಾಗಿದೆ. ಆ. 28ರಂದು ನಡೆಯಬೇಕಿದ್ದ ಕೌನ್ಸಿಲ್ ಸಭೆಯೂ ಕಾರಣಾಂತರಗಳಿಂದ ನಡೆದಿರಲಿಲ್ಲ. ಇದನ್ನು ಖಂಡಿಸಿ ವಿರೋಧ ಪಕ್ಷಗಳು ಬಿಬಿಎಂಪಿ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದವು.</p>.<p>ಶೋಕಾಚರಣೆಯ ಅವಧಿಏ.6ರಂದು ಮುಕ್ತಾಯವಾಗಲಿದೆ. ಪಾಲಿಕೆಯಲ್ಲಿ ಈಗಿನ ಮೇಯರ್ ಅವರ ಅಧಿಕಾರದ ಅವಧಿ ಇದೇ 10ರಂದು ಮುಕ್ತಾಯವಾಗಲಿದೆ. ಮುಂದೂಡಿಕೆಯಾದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಹಾಗೂ ಕೌನ್ಸಿಲ್ ಸಭೆಯನ್ನು ಅಷ್ಟರ ಒಳಗಾಗಿ ನಡೆಸಬೇಕಾಗಿದೆ.</p>.<p>‘ಬುಧವಾರ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಯನ್ನು ನಮ್ಮ ಅಧಿಕಾರದ ಅವಧಿ ಮುಗಿಯುವುದರ ಒಳಗೆ ನಡೆಸುತ್ತೇವೆ. ಏ. 8ರಂದು ಅಥವಾ 9ರಂದು ಈ ಕಾರ್ಯಕ್ರಮ ನಡೆಸುವ ಚಿಂತನೆ ಇದೆ. ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ’ ಎಂದು ಮೇಯರ್ ಎಂ.ಗೌತಮ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಇದೇ 2ರಂದು ನಡೆಯಬೇಕಾಗಿದ್ದ ನಾಡಪ್ರಭು ಕೆಂಪೇಗೌಡ ದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದ ಶೋಕಾಚರಣೆ ಸಲುವಾಗಿ ಬಿಬಿಎಂಪಿ ಮುಂದೂಡಿದೆ.</p>.<p>ಈ ಸಾಲಿನ ಕೆಂಪೇಗೌಡ ಜಯಂತಿ ಮುಂದೂಡಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಸಾಲಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ದಿನವೇ (ಏ.08) ಈ ಕಾರ್ಯಕ್ರಮವನ್ನು ಏರ್ಪಡಿಸಲು ಬಿಬಿಎಂಪಿ ನಿರ್ಧರಿಸಿತ್ತು. ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಯಾಗಿದ್ದರಿಂದ ಈ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.</p>.<p>ಸೆ.5ರಂದು ನಡೆಯಬೇಕಿದ್ದ ಪಾಲಿಕೆ ಕೌನ್ಸಿಲ್ ಸಭೆಯನ್ನೂ ಕೂಡ ಶೋಕಾಚರಣೆಯ ಕಾರಣಕ್ಕೆ ಮುಂದೂಡಲಾಗಿದೆ. ಆ. 28ರಂದು ನಡೆಯಬೇಕಿದ್ದ ಕೌನ್ಸಿಲ್ ಸಭೆಯೂ ಕಾರಣಾಂತರಗಳಿಂದ ನಡೆದಿರಲಿಲ್ಲ. ಇದನ್ನು ಖಂಡಿಸಿ ವಿರೋಧ ಪಕ್ಷಗಳು ಬಿಬಿಎಂಪಿ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದವು.</p>.<p>ಶೋಕಾಚರಣೆಯ ಅವಧಿಏ.6ರಂದು ಮುಕ್ತಾಯವಾಗಲಿದೆ. ಪಾಲಿಕೆಯಲ್ಲಿ ಈಗಿನ ಮೇಯರ್ ಅವರ ಅಧಿಕಾರದ ಅವಧಿ ಇದೇ 10ರಂದು ಮುಕ್ತಾಯವಾಗಲಿದೆ. ಮುಂದೂಡಿಕೆಯಾದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಹಾಗೂ ಕೌನ್ಸಿಲ್ ಸಭೆಯನ್ನು ಅಷ್ಟರ ಒಳಗಾಗಿ ನಡೆಸಬೇಕಾಗಿದೆ.</p>.<p>‘ಬುಧವಾರ ನಡೆಯಬೇಕಿದ್ದ ಕೆಂಪೇಗೌಡ ಜಯಂತಿಯನ್ನು ನಮ್ಮ ಅಧಿಕಾರದ ಅವಧಿ ಮುಗಿಯುವುದರ ಒಳಗೆ ನಡೆಸುತ್ತೇವೆ. ಏ. 8ರಂದು ಅಥವಾ 9ರಂದು ಈ ಕಾರ್ಯಕ್ರಮ ನಡೆಸುವ ಚಿಂತನೆ ಇದೆ. ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ’ ಎಂದು ಮೇಯರ್ ಎಂ.ಗೌತಮ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>