ಬೆಂಗಳೂರು ನಗರವನ್ನು ನಿರ್ಮಿಸಿದ ಕೆಂಪೇಗೌಡರ ಆಶಯಕ್ಕೆ ಪೂರಕವಾಗಿ ಈಗ ವಿಸ್ತಾರವಾಗಿ ಬೆಳೆದಿದೆ. ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ, ವಿಪ್ರೊ ಮುಖ್ಯಸ್ಥ ಅಝೀಂ ಪ್ರೇಂಜಿ ಸೇರಿದಂತೆ ಹಲವರು ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಇದರ ಪರಿಣಾಮವಾಗಿ, 'ಭಾರತವನ್ನು ಬೆಂಗಳೂರಿನ ಮೂಲಕ ನೋಡಬೇಕು ಎಂದು ಹಿಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದರು' ಎಂದು ನೆನಪಿಸಿಕೊಂಡರು.