<p><strong>ಯಲಹಂಕ:</strong> ‘ಇಂದಿನ ಸ್ಮಾರ್ಟ್ ಸಿಟಿ ಯೋಜನೆಗೆ ಪೂರಕವೆಂಬಂತೆ ನಾಡಪ್ರಭು ಕೆಂಪೇಗೌಡರು ಐನೂರು ವರ್ಷಗಳ ಹಿಂದೆಯೇ ಬೆಂಗಳೂರು ನಗರವನ್ನು ನಿರ್ಮಿಸಿದ್ದಾರೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಹಾಗೂ ಕೆಂಪೇಗೌಡ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ದೂರದೃಷ್ಟಿತ್ವ ಹೊಂದಿದ್ದ ಕೆಂಪೇಗೌಡರು, ರಸ್ತೆಗಳು, ದೇವಸ್ಥಾನ, ಕಲ್ಯಾಣಿ, ಕೆರೆಗಳು ಹಾಗೂ ಉದ್ಯಾನಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಎಲ್ಲಾ ಜಾತಿಗಳವರೂ ವ್ಯಾಪಾರ ಮಾಡಲು ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಮಾತನಾಡಿ, ‘ಬೆಂಗಳೂರನ್ನು ಗುರುತಿಸುವ ರೀತಿಯಲ್ಲಿ ಕೆಂಪೇಗೌಡರು ಅಭಿವೃದ್ಧಿಪಡಿಸಿದ್ದಾರೆ. ಇಂತಹ ಮಹಾಪುರುಷನನ್ನು ನಾವೆಲ್ಲರೂ ಸದಾ ಸ್ಮರಿಸಬೇಕು’ ಎಂದು ಹೇಳಿದರು.</p>.<p>‘ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಸದಸ್ಯರು ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳ ಕುರಿತ ಮನವಿಪತ್ರ ನೀಡಿದ್ದಾರೆ. ಸರ್ಕಾರದ ಗಮನಕ್ಕೆ ತರುವುದರ ಜೊತೆಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಬಗೆಹರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಎಚ್.ಎಂ.ರಮೇಶ್ಗೌಡ, ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪ ನಿರ್ದೇಶಕ ಕೆ.ಜಿ.ಆಂಜಿನಪ್ಪ, ಒಕ್ಕೂಟದ ಅಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ವಿ.ಸುರೇಶ್, ಉಪಾಧ್ಯಕ್ಷ ಸಿ.ಡಿ.ಪಾಪೇಗೌಡ, ಖಜಾಂಚಿ ಎಚ್.ವಿ.ಚಿಕ್ಕಹನುಮಂತೇಗೌಡ, ಸಹ ಕಾರ್ಯದರ್ಶಿ ಆರ್.ಬಿ.ಬೀರೇಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<p>ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 41 ಗಣ್ಯರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. </p>.<p>ಮೆರವಣಿಗೆ: ಇದಕ್ಕೂ ಮುನ್ನ ಮಿನಿ ವಿಧಾನಸೌಧದ ಆವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿರಥದಲ್ಲಿ ಇಟ್ಟು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಇಂದಿನ ಸ್ಮಾರ್ಟ್ ಸಿಟಿ ಯೋಜನೆಗೆ ಪೂರಕವೆಂಬಂತೆ ನಾಡಪ್ರಭು ಕೆಂಪೇಗೌಡರು ಐನೂರು ವರ್ಷಗಳ ಹಿಂದೆಯೇ ಬೆಂಗಳೂರು ನಗರವನ್ನು ನಿರ್ಮಿಸಿದ್ದಾರೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಹಾಗೂ ಕೆಂಪೇಗೌಡ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ದೂರದೃಷ್ಟಿತ್ವ ಹೊಂದಿದ್ದ ಕೆಂಪೇಗೌಡರು, ರಸ್ತೆಗಳು, ದೇವಸ್ಥಾನ, ಕಲ್ಯಾಣಿ, ಕೆರೆಗಳು ಹಾಗೂ ಉದ್ಯಾನಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಎಲ್ಲಾ ಜಾತಿಗಳವರೂ ವ್ಯಾಪಾರ ಮಾಡಲು ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಮಾತನಾಡಿ, ‘ಬೆಂಗಳೂರನ್ನು ಗುರುತಿಸುವ ರೀತಿಯಲ್ಲಿ ಕೆಂಪೇಗೌಡರು ಅಭಿವೃದ್ಧಿಪಡಿಸಿದ್ದಾರೆ. ಇಂತಹ ಮಹಾಪುರುಷನನ್ನು ನಾವೆಲ್ಲರೂ ಸದಾ ಸ್ಮರಿಸಬೇಕು’ ಎಂದು ಹೇಳಿದರು.</p>.<p>‘ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಸದಸ್ಯರು ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳ ಕುರಿತ ಮನವಿಪತ್ರ ನೀಡಿದ್ದಾರೆ. ಸರ್ಕಾರದ ಗಮನಕ್ಕೆ ತರುವುದರ ಜೊತೆಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಬಗೆಹರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಎಚ್.ಎಂ.ರಮೇಶ್ಗೌಡ, ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪ ನಿರ್ದೇಶಕ ಕೆ.ಜಿ.ಆಂಜಿನಪ್ಪ, ಒಕ್ಕೂಟದ ಅಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ವಿ.ಸುರೇಶ್, ಉಪಾಧ್ಯಕ್ಷ ಸಿ.ಡಿ.ಪಾಪೇಗೌಡ, ಖಜಾಂಚಿ ಎಚ್.ವಿ.ಚಿಕ್ಕಹನುಮಂತೇಗೌಡ, ಸಹ ಕಾರ್ಯದರ್ಶಿ ಆರ್.ಬಿ.ಬೀರೇಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<p>ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 41 ಗಣ್ಯರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. </p>.<p>ಮೆರವಣಿಗೆ: ಇದಕ್ಕೂ ಮುನ್ನ ಮಿನಿ ವಿಧಾನಸೌಧದ ಆವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿರಥದಲ್ಲಿ ಇಟ್ಟು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>