<p><strong>ಬೆಂಗಳೂರು: </strong>ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ.</p>.<p>ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.</p>.<p>‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ.</p>.<p>ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.</p>.<p>‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>