<p><strong>ಕೆಂಗೇರಿ:</strong> ‘ಜಲಮಂಡಳಿ ಅಧಿಕಾರಿಗಳು ಸಮರ್ಪಕವಾಗಿ ಕಾವೇರಿ ನೀರು ಸರಬರಾಜು ಮಾಡುತ್ತಿಲ್ಲ’ ಎಂದು ಆರೋಪಿಸಿ ಕೆಂಗೇರಿ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಕೆಂಗೇರಿ ವಾರ್ಡ್ನ ಕಾರ್ಪೊರೇಟರ್ ವಿ.ವಿ.ಸತ್ಯನಾರಾಯಣ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ನಾಲ್ಕು ದಿನಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯಲು ಬಾಟಲ್ ನೀರಿನ ಮೇಲೆ ಅವಲಂಬಿತರಾಗಿದ್ದೇವೆ. ಸಮಸ್ಯೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಕ್ರಮ ವಹಿಸದೆ ಕಣ್ಣು ಮುಚ್ಚಿ ಕುಳಿತ್ತಿದ್ದಾರೆ’ ಎಂದುಜಲಮಂಡಳಿಯ ಕೆಂಗೇರಿ ಉಪನಗರ ಸೇವಾಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ’ ಎಂದು ಕೆಂಗೇರಿ ಉಪನಗರ, ಸುಭಾಷ ನಗರ, ಎಂ.ಟಿ.ಎಸ್.ಬಡಾವಣೆ ನಿವಾಸಿಗಳು ಎಚ್ಚರಿಕೆ ನೀಡಿದರು.</p>.<p>ವಿ.ವಿ.ಸತ್ಯನಾರಾಯಣ,‘ಕೆಂಗೇರಿ ಸುತ್ತಮುತ್ತ ನೀರಿಗಾಗಿ ಹಾಹಾಕಾರ ಎದುರಾಗಿದೆ. ಜಲಮಂಡಳಿ ಅಧಿಕಾರಿಗಳು ಬಿ.ಜೆ.ಪಿ.ಯಿಂದ ಆಯ್ಕೆಯಾಗಿರುವ ಪಾಲಿಕೆ ಸದಸ್ಯರಿರುವ ವಾರ್ಡ್ಗಳಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಭರವಸೆ: ನಿವಾಸಿಗಳಿಂದ ಮನವಿ ಪತ್ರ ಸ್ವೀಕರಿಸಿದ ಜಲಮಂಡಳಿಯ ಹೆಚ್ಚುವರಿ ಮುಖ್ಯ ಎಂಜಿನಿಯರ್ ಮಹೇಶ್,‘ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ನೀರು ಸರಬರಾಜಿನಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ತಿಳಿಸಿದರು.</p>.<p>ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಗೌಡ, ಸಹಾಯಕ ಎಂಜಿನಿಯರ್ ಚನ್ನಪ್ಪ ಅವರು ನಾಗರಿಕರ ಮನವಿಗಳನ್ನು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ‘ಜಲಮಂಡಳಿ ಅಧಿಕಾರಿಗಳು ಸಮರ್ಪಕವಾಗಿ ಕಾವೇರಿ ನೀರು ಸರಬರಾಜು ಮಾಡುತ್ತಿಲ್ಲ’ ಎಂದು ಆರೋಪಿಸಿ ಕೆಂಗೇರಿ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಕೆಂಗೇರಿ ವಾರ್ಡ್ನ ಕಾರ್ಪೊರೇಟರ್ ವಿ.ವಿ.ಸತ್ಯನಾರಾಯಣ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ನಾಲ್ಕು ದಿನಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯಲು ಬಾಟಲ್ ನೀರಿನ ಮೇಲೆ ಅವಲಂಬಿತರಾಗಿದ್ದೇವೆ. ಸಮಸ್ಯೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಕ್ರಮ ವಹಿಸದೆ ಕಣ್ಣು ಮುಚ್ಚಿ ಕುಳಿತ್ತಿದ್ದಾರೆ’ ಎಂದುಜಲಮಂಡಳಿಯ ಕೆಂಗೇರಿ ಉಪನಗರ ಸೇವಾಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ’ ಎಂದು ಕೆಂಗೇರಿ ಉಪನಗರ, ಸುಭಾಷ ನಗರ, ಎಂ.ಟಿ.ಎಸ್.ಬಡಾವಣೆ ನಿವಾಸಿಗಳು ಎಚ್ಚರಿಕೆ ನೀಡಿದರು.</p>.<p>ವಿ.ವಿ.ಸತ್ಯನಾರಾಯಣ,‘ಕೆಂಗೇರಿ ಸುತ್ತಮುತ್ತ ನೀರಿಗಾಗಿ ಹಾಹಾಕಾರ ಎದುರಾಗಿದೆ. ಜಲಮಂಡಳಿ ಅಧಿಕಾರಿಗಳು ಬಿ.ಜೆ.ಪಿ.ಯಿಂದ ಆಯ್ಕೆಯಾಗಿರುವ ಪಾಲಿಕೆ ಸದಸ್ಯರಿರುವ ವಾರ್ಡ್ಗಳಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಭರವಸೆ: ನಿವಾಸಿಗಳಿಂದ ಮನವಿ ಪತ್ರ ಸ್ವೀಕರಿಸಿದ ಜಲಮಂಡಳಿಯ ಹೆಚ್ಚುವರಿ ಮುಖ್ಯ ಎಂಜಿನಿಯರ್ ಮಹೇಶ್,‘ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ನೀರು ಸರಬರಾಜಿನಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ತಿಳಿಸಿದರು.</p>.<p>ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಗೌಡ, ಸಹಾಯಕ ಎಂಜಿನಿಯರ್ ಚನ್ನಪ್ಪ ಅವರು ನಾಗರಿಕರ ಮನವಿಗಳನ್ನು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>