‘ಮಂಡ್ಯ ಜಿಲ್ಲೆಯವನಾದ ಆರೋಪಿಯು ಕೆಂಗೇರಿ ಉಪನಗರದ 5ನೇ ಮುಖ್ಯರಸ್ತೆಯ 5ನೇ ತಿರುವಿನಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಅಕ್ಟೋಬರ್ 28 ರಂದು ಕಚೇರಿಯ ನಗದು ಕೌಂಟರ್ನಲ್ಲಿ ಇಟ್ಟಿದ್ದ ಹಣ ಕಳುವಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ನೌಕರರನ್ನು ಕರೆದು ವಿಚಾರಣೆ ನಡೆಸಲಾಗಿತ್ತು. ಹೇಮಂತ್ ಮೇಲೆ ಅನುಮಾನ ಮೂಡಿದ್ದರಿಂದ ಆತನನ್ನು ಪ್ರತ್ಯೇಕವಾಗಿ ವಿಚಾರಿಸಲಾಗಿತ್ತು. ಈ ವೇಳೆ ಹಣ ಕದ್ದಿದ್ದಾಗಿ ಒಪ್ಪಿಕೊಂಡಿದ್ದ’ ಎಂದು ಪೊಲೀಸರು ಹೇಳಿದ್ದಾರೆ.