<p><strong>ಕೆಂಗೇರಿ:</strong> ಕೋಟೆ ಶ್ರೀಸೋಮೇಶ್ವರಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಗಿರಿಜಾ ಕಲ್ಯಾಣ ಮಹೋತ್ಸವ ಹಾಗೂ ಧಾರಾ ಮಹೋತ್ಸವ ಕೆಂಗೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಶ್ರೀ ಸೋಮೇಶ್ವರ ಸ್ವಾಮಿ ಮತ್ತು ಪಾರ್ವತಿ ಅಮ್ಮನವರ ಉತ್ಸವಮೂರ್ತಿಗಳನ್ನಿರಿಸಿ ರಾಜಾ ಹೋಮ, ಪ್ರಧಾನ ಹೋಮ, ಸಪ್ತಪದಿ, ಆರುಂಧತಿ ಪೂಜೆ ಸೇರಿದಂತೆ ಕಲ್ಯಾಣೋತ್ಸವದ ವಿವಿಧ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.</p>.<p>ವಿದ್ಯುತ್ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿದ್ದ ದೇವಾಲಯದಲ್ಲಿ ಕಲ್ಯಾಣ ಸಡಗರ ಕಳೆಗಟ್ಟಿತ್ತು. ಕಲ್ಯಾಣೋತ್ಸವದ ನಿಮಿತ್ತ ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಕೆಂಗೇರಿ ಯಲ್ಲಮ್ಮ ದೇವಾಲಯದಿಂದ ತಂಬಿಟ್ಟಿನ ಆರತಿಯನ್ನು ಮೆರವಣಿಗೆ ಮೂಲಕ ಕೋಟೆ ಸೋಮೇಶ್ವರ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಿದರು.</p>.<p>ಬುಧವಾರದಿಂದಲೇ ಆರಂಭವಾಗಿದ್ದ ಪೂಜಾ ಕೈಂಕರ್ಯದ ಭಾಗವಾಗಿ ಸೋಮೇಶ್ವರ ದೇವಾಲಯ ಆವರಣದಲ್ಲಿ 1400 ಕ್ಕೂ ಮುತ್ತೈದೆಯರಿಗೆ ಬಳೆ ತೊಡಿಸಲಾಯಿತು. ಕಲ್ಯಾಣೋತ್ಸವದ ಬಳಿಕ ಸಂಜೆ ಕೆಂಗೇರಿಯ ಪ್ರಮುಖ ರಾಜಬೀದಿಯಲ್ಲಿ ಸಂಚರಿಸಿದ ಗಿರಿಜಾ ಕಲ್ಯಾಣೋತ್ಸವ ರಥಕ್ಕೆ ನಮಿಸುವ ಮೂಲಕ ಸಾವಿರಾರು ಭಕ್ತರು ಭಕ್ತಿ ಭಾವ ಮೆರೆದರು.</p>.<p>ಶಾಸಕ ಎಸ್.ಟಿ.ಸೋಮಶೇಖರ್, ಕ್ಷೇತ್ರದ 17 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಬಿಬಿಎಂಪಿ ವಾರ್ಡ್ ಅಧ್ಯಕ್ಷರು, ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಕೋಟೆ ಶ್ರೀಸೋಮೇಶ್ವರಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಗಿರಿಜಾ ಕಲ್ಯಾಣ ಮಹೋತ್ಸವ ಹಾಗೂ ಧಾರಾ ಮಹೋತ್ಸವ ಕೆಂಗೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಶ್ರೀ ಸೋಮೇಶ್ವರ ಸ್ವಾಮಿ ಮತ್ತು ಪಾರ್ವತಿ ಅಮ್ಮನವರ ಉತ್ಸವಮೂರ್ತಿಗಳನ್ನಿರಿಸಿ ರಾಜಾ ಹೋಮ, ಪ್ರಧಾನ ಹೋಮ, ಸಪ್ತಪದಿ, ಆರುಂಧತಿ ಪೂಜೆ ಸೇರಿದಂತೆ ಕಲ್ಯಾಣೋತ್ಸವದ ವಿವಿಧ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.</p>.<p>ವಿದ್ಯುತ್ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿದ್ದ ದೇವಾಲಯದಲ್ಲಿ ಕಲ್ಯಾಣ ಸಡಗರ ಕಳೆಗಟ್ಟಿತ್ತು. ಕಲ್ಯಾಣೋತ್ಸವದ ನಿಮಿತ್ತ ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಕೆಂಗೇರಿ ಯಲ್ಲಮ್ಮ ದೇವಾಲಯದಿಂದ ತಂಬಿಟ್ಟಿನ ಆರತಿಯನ್ನು ಮೆರವಣಿಗೆ ಮೂಲಕ ಕೋಟೆ ಸೋಮೇಶ್ವರ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಿದರು.</p>.<p>ಬುಧವಾರದಿಂದಲೇ ಆರಂಭವಾಗಿದ್ದ ಪೂಜಾ ಕೈಂಕರ್ಯದ ಭಾಗವಾಗಿ ಸೋಮೇಶ್ವರ ದೇವಾಲಯ ಆವರಣದಲ್ಲಿ 1400 ಕ್ಕೂ ಮುತ್ತೈದೆಯರಿಗೆ ಬಳೆ ತೊಡಿಸಲಾಯಿತು. ಕಲ್ಯಾಣೋತ್ಸವದ ಬಳಿಕ ಸಂಜೆ ಕೆಂಗೇರಿಯ ಪ್ರಮುಖ ರಾಜಬೀದಿಯಲ್ಲಿ ಸಂಚರಿಸಿದ ಗಿರಿಜಾ ಕಲ್ಯಾಣೋತ್ಸವ ರಥಕ್ಕೆ ನಮಿಸುವ ಮೂಲಕ ಸಾವಿರಾರು ಭಕ್ತರು ಭಕ್ತಿ ಭಾವ ಮೆರೆದರು.</p>.<p>ಶಾಸಕ ಎಸ್.ಟಿ.ಸೋಮಶೇಖರ್, ಕ್ಷೇತ್ರದ 17 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಬಿಬಿಎಂಪಿ ವಾರ್ಡ್ ಅಧ್ಯಕ್ಷರು, ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>