ಸಿವಿಲ್ ಕಾಮಗಾರಿ ಮುಗಿದಿದ್ದು, ನಿಲ್ದಾಣಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ ಹಾಗೂ ಕೆಂಗೇರಿ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಈ ವಿಸ್ತರಿತ ಮಾರ್ಗದಲ್ಲಿ ದಿನಕ್ಕೆ 75 ಸಾವಿರ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ ಇದೆ ಎಂದು ನಿಗಮ ಹೇಳಿದೆ.
ಏ.3ರಿಂದ ಈ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭಿಸಲಾಗಿತ್ತು.