<p>ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಗಳು, ಒಂಟಿಯಾಗಿದ್ದ ದಿವ್ಯಾ (36) ಎಂಬುವವರನ್ನು ಕೊಂದು ಚಿನ್ನದ ಸರ ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>‘ಕೋನಸಂದ್ರದಲ್ಲಿರುವ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಈ ಕೃತ್ಯ ನಡೆದಿದೆ. ಕೊಲೆ ಹಾಗೂ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದಿವ್ಯಾ ಅವರು ಪತಿ ಜೊತೆ ವಾಸವಿದ್ದರು. ಪತಿ, ಸಲೂನ್ ಮಳಿಗೆ ನಡೆಸುತ್ತಿದ್ದರು. ಗುರುವಾರ ಪತಿ ಮಳಿಗೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಒಬ್ಬರೇ ಮನೆಯಲ್ಲಿದ್ದರು’ ಎಂದು ತಿಳಿಸಿದರು.</p>.<p class="Subhead">ಚಿನ್ನದ ಸರ ದೋಚಲು ಕೃತ್ಯ: ‘ದಿವ್ಯಾ ಅವರು ಚಿನ್ನದ ಸರ ಧರಿಸಿದ್ದರು. ಅದನ್ನು ನೋಡಿದ್ದ ಆರೋಪಿಗಳು, ಮನೆ ಬಳಿ ಹಲವು ಸುತ್ತಾಡಿದ್ದರೆಂದು ಗೊತ್ತಾಗಿದೆ. ಮನೆಯಲ್ಲಿ ಯಾರೂ ಇಲ್ಲವೆಂಬುದು ಗೊತ್ತಾಗುತ್ತಿದ್ದಂತೆ ಆರೋಪಿಗಳು, ಒಳಗೆ ನುಗ್ಗಿ ಚಿನ್ನದ ಸರ ಕಿತ್ತುಕೊಳ್ಳಲು ಮುಂದಾಗಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದಿವ್ಯಾ ಅವರು ಪ್ರತಿರೋಧವೊಡ್ಡಿದ್ದರು. ಆರೋಪಿಗಳು, ಕುತ್ತಿಗೆ ಹಿಸುಕಿ ದಿವ್ಯಾ ಅವರನ್ನು ಕೊಂದು ಪರಾರಿಯಾಗಿದ್ದಾರೆ. ಜೊತೆಗೆ, ಚಿನ್ನದ ಸರವನ್ನೂ ಕಿತ್ತೊಯ್ದಿದ್ದಾರೆ’ ಎಂದು ತಿಳಿಸಿವೆ.</p>.<p>‘ಚಿನ್ನದ ಸರಕ್ಕಾಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಆದರೆ, ಬೇರೆ ಕಾರಣವೂ ಇರುವ ಸಂಶಯವಿದೆ. ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಗಳು, ಒಂಟಿಯಾಗಿದ್ದ ದಿವ್ಯಾ (36) ಎಂಬುವವರನ್ನು ಕೊಂದು ಚಿನ್ನದ ಸರ ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>‘ಕೋನಸಂದ್ರದಲ್ಲಿರುವ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಈ ಕೃತ್ಯ ನಡೆದಿದೆ. ಕೊಲೆ ಹಾಗೂ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದಿವ್ಯಾ ಅವರು ಪತಿ ಜೊತೆ ವಾಸವಿದ್ದರು. ಪತಿ, ಸಲೂನ್ ಮಳಿಗೆ ನಡೆಸುತ್ತಿದ್ದರು. ಗುರುವಾರ ಪತಿ ಮಳಿಗೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಒಬ್ಬರೇ ಮನೆಯಲ್ಲಿದ್ದರು’ ಎಂದು ತಿಳಿಸಿದರು.</p>.<p class="Subhead">ಚಿನ್ನದ ಸರ ದೋಚಲು ಕೃತ್ಯ: ‘ದಿವ್ಯಾ ಅವರು ಚಿನ್ನದ ಸರ ಧರಿಸಿದ್ದರು. ಅದನ್ನು ನೋಡಿದ್ದ ಆರೋಪಿಗಳು, ಮನೆ ಬಳಿ ಹಲವು ಸುತ್ತಾಡಿದ್ದರೆಂದು ಗೊತ್ತಾಗಿದೆ. ಮನೆಯಲ್ಲಿ ಯಾರೂ ಇಲ್ಲವೆಂಬುದು ಗೊತ್ತಾಗುತ್ತಿದ್ದಂತೆ ಆರೋಪಿಗಳು, ಒಳಗೆ ನುಗ್ಗಿ ಚಿನ್ನದ ಸರ ಕಿತ್ತುಕೊಳ್ಳಲು ಮುಂದಾಗಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದಿವ್ಯಾ ಅವರು ಪ್ರತಿರೋಧವೊಡ್ಡಿದ್ದರು. ಆರೋಪಿಗಳು, ಕುತ್ತಿಗೆ ಹಿಸುಕಿ ದಿವ್ಯಾ ಅವರನ್ನು ಕೊಂದು ಪರಾರಿಯಾಗಿದ್ದಾರೆ. ಜೊತೆಗೆ, ಚಿನ್ನದ ಸರವನ್ನೂ ಕಿತ್ತೊಯ್ದಿದ್ದಾರೆ’ ಎಂದು ತಿಳಿಸಿವೆ.</p>.<p>‘ಚಿನ್ನದ ಸರಕ್ಕಾಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಆದರೆ, ಬೇರೆ ಕಾರಣವೂ ಇರುವ ಸಂಶಯವಿದೆ. ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>