<p><strong>ಕೆಂಗೇರಿ:</strong> ರಾಜ್ಯದ ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರ ಕೋವಿಡ್ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಂಡಿದೆ<br />ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಸ್ಪಷ್ಟಪಡಿಸಿದರು.</p>.<p>ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೋಳಾರೆ, ಕಗ್ಗಲಿಪುರ, ಕೆ.ಗೊಲ್ಲಹಳ್ಳಿ, ಕುಂಬಳಗೂಡು, ಚಂದ್ರಪ್ಪ ಸರ್ಕಲ್ ಹಾಗೂ ತಾವರೆಕೆರೆ, ಕನ್ನಳ್ಳಿ, ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಕೋವಿಡ್ 2ನೇ ಅಲೆಯ ಸೋಂಕು ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕಠಿಣವಾದ ನಿಯಮಗಳನ್ನು ಜಾರಿಗೆ ತಂದಿದೆ. ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ತಡೆಗೆ ಸಹಕರಿಸಬೇಕು ಎಂದರು.</p>.<p>ಆರಂಭದಲ್ಲಿ ಕೆಲ ಗೊಂದಲಗಳಾಗುವುದು ಸಹಜ. ಆಮ್ಲಜನಕ ಮತ್ತು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಆಸ್ಪತ್ರೆಗಳು ಹಾಗೂ ಅಧಿಕಾರಿಗಳು ಜನರಿಗೆ ತೊಂದರೆಯಾಗದಂತೆ, ಯಾವುದೇ ದೂರು ಬಾರದಂತೆ ಕಾರ್ಯನಿರ್ವಹಿಸಿಬೇಕು ಎಂದು ಎಚ್ಚರಿಕೆ ನೀಡಿದರು.</p>.<p class="Subhead"><strong>ಸಿಬ್ಬಂದಿ ಕೊರತೆ ನೀಗಿಸಲು ಮನವಿ:</strong> ಇದೇ ವೇಳೆ ಸಿಬ್ಬಂದಿ ಕೊರತೆ ಬಗ್ಗೆ ಗಮನ ಸೆಳೆದ ತಾವರೆಕೆರೆ ವೈದ್ಯಾಧಿಕಾರಿ ಡಾ.ನಂದಿನಿ, ಲ್ಯಾಬ್ ಟೆಕ್ನಿಷಿಯನ್ ಸಾವಿನಿಂದ ಖಾಲಿ ಇರುವ ಹುದ್ದೆಗೆ ಯಾರನ್ನು ಭರ್ತಿ ಮಾಡಿಲ್ಲ. ಶೀಘ್ರ ನೇಮಕ ಮಾಡುವಂತೆ ಮನವಿ ಮಾಡಿದರು.</p>.<p class="Subhead">ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕುಮಾರ್, ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗವೇಣಿ, ತಹಶೀಲ್ದಾರ್ ರಾಮಲಕ್ಷ್ಮಣ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ರಾಜ್ಯದ ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರ ಕೋವಿಡ್ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಂಡಿದೆ<br />ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಸ್ಪಷ್ಟಪಡಿಸಿದರು.</p>.<p>ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೋಳಾರೆ, ಕಗ್ಗಲಿಪುರ, ಕೆ.ಗೊಲ್ಲಹಳ್ಳಿ, ಕುಂಬಳಗೂಡು, ಚಂದ್ರಪ್ಪ ಸರ್ಕಲ್ ಹಾಗೂ ತಾವರೆಕೆರೆ, ಕನ್ನಳ್ಳಿ, ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಕೋವಿಡ್ 2ನೇ ಅಲೆಯ ಸೋಂಕು ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕಠಿಣವಾದ ನಿಯಮಗಳನ್ನು ಜಾರಿಗೆ ತಂದಿದೆ. ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ತಡೆಗೆ ಸಹಕರಿಸಬೇಕು ಎಂದರು.</p>.<p>ಆರಂಭದಲ್ಲಿ ಕೆಲ ಗೊಂದಲಗಳಾಗುವುದು ಸಹಜ. ಆಮ್ಲಜನಕ ಮತ್ತು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಆಸ್ಪತ್ರೆಗಳು ಹಾಗೂ ಅಧಿಕಾರಿಗಳು ಜನರಿಗೆ ತೊಂದರೆಯಾಗದಂತೆ, ಯಾವುದೇ ದೂರು ಬಾರದಂತೆ ಕಾರ್ಯನಿರ್ವಹಿಸಿಬೇಕು ಎಂದು ಎಚ್ಚರಿಕೆ ನೀಡಿದರು.</p>.<p class="Subhead"><strong>ಸಿಬ್ಬಂದಿ ಕೊರತೆ ನೀಗಿಸಲು ಮನವಿ:</strong> ಇದೇ ವೇಳೆ ಸಿಬ್ಬಂದಿ ಕೊರತೆ ಬಗ್ಗೆ ಗಮನ ಸೆಳೆದ ತಾವರೆಕೆರೆ ವೈದ್ಯಾಧಿಕಾರಿ ಡಾ.ನಂದಿನಿ, ಲ್ಯಾಬ್ ಟೆಕ್ನಿಷಿಯನ್ ಸಾವಿನಿಂದ ಖಾಲಿ ಇರುವ ಹುದ್ದೆಗೆ ಯಾರನ್ನು ಭರ್ತಿ ಮಾಡಿಲ್ಲ. ಶೀಘ್ರ ನೇಮಕ ಮಾಡುವಂತೆ ಮನವಿ ಮಾಡಿದರು.</p>.<p class="Subhead">ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕುಮಾರ್, ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗವೇಣಿ, ತಹಶೀಲ್ದಾರ್ ರಾಮಲಕ್ಷ್ಮಣ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>