<p><strong>ಕೆಂಗೇರಿ:</strong> ‘ಕಸ ವೈಜ್ಞಾನಿಕ ನಿರ್ವಹಣೆಗಾಗಿ ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ಪ್ರಸಕ್ತ ಸಾಲಿನಿಂದ ₹900 ವಾರ್ಷಿಕ ತೆರಿಗೆ ನಿಗದಿ ಪಡಿಸಲಾಗಿದೆ’ ಎಂದುಸೂಲಿಕೆರೆ ಗ್ರಾಮ ಪಂಚಾಯಿತಿಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ತಿಳಿಸಿದರು.</p>.<p>ಸೂಲಿಕೆರೆ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಡುಗೆ ಕೋಣೆಯ ಸಂಖ್ಯೆ ಆಧರಿಸಿ ದರ ನಿಗದಿ ಮಾಡಲಾಗುತ್ತಿದೆ. ಗ್ರಾಮೀಣ ಭಾಗಗಳಿಗೂ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ಘನತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಯ ಅಗತ್ಯವಿದೆ. ಇದಕ್ಕಾಗಿ ₹35 ಲಕ್ಷ ಮೊತ್ತದ ಕ್ರಿಯಾ ಯೋಜನೆ ರೂಪಿಸಲಾಗಿದೆ. ಈ ಹಣವನ್ನು ಬಳಕೆದಾರರಿಂದ ಪಡೆಯಲು ತೆರಿಗೆ ಸಂಗ್ರಹಕ್ಕೆ ಕ್ರಮ ವಹಿಸಲಾಗಿದೆ’ ಎಂದರು.</p>.<p>‘ನೀರಿನ ದರ ಹಾಗೂ ಕಟ್ಟಡ ತೆರಿಗೆಯನ್ನೂ ಪರಿಷ್ಕರಿಸಲಾಗಿದೆ. ನಾಗರಿಕರು ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗವೇಣಿ,‘ಕೋವಿಡ್ ಮೂರನೇ ಅಲೆಯ ಸೂಚನೆ ಇದೆ. ಸೂಲಿಕೆರೆ ವ್ಯಾಪ್ತಿಯಲ್ಲಿ ಶೇ 80ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ಉಳಿದವರೂ ಶೀಘ್ರವಾಗಿ ಲಸಿಕೆ ಹಾಕಿಸಿಕೊಳ್ಳಿ’ ಎಂದರು.</p>.<p>‘ಕೊಮ್ಮಘಟ್ಟ ಕೆರೆಗೆ ಸುತ್ತಮುತ್ತಲ ಬಡಾವಣೆಗಳ ಕೊಳಚೆ ನೀರು ಸೇರುತ್ತಿದೆ. ವರ್ಷ ಕಳೆದರೂ ವೃದ್ಧಾಪ್ಯ ವೇತನ, ವಿಧವಾ ವೇತನ ಖಾತೆಗೆ ಜಮಾ ಆಗುತ್ತಿಲ್ಲ.ಪಶುವೈದ್ಯರು ಗ್ರಾಮಗಳತ್ತ ಸುಳಿಯುತ್ತಲೇ ಇಲ್ಲ. ದನ–ಕರುಗಳಿಗೆ ಅನಾರೋಗ್ಯ ಉಂಟಾದರೆ ಏನು ಮಾಡಬೇಕು’ ಎಂದು ಗ್ರಾಮಸ್ಥರು ಸಭೆಯಲ್ಲಿ ಅಳಲು ತೋಡಿಕೊಂಡರು.</p>.<p>ಸಭೆಯಲ್ಲಿ 25 ಮಂದಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ವಿತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ‘ಕಸ ವೈಜ್ಞಾನಿಕ ನಿರ್ವಹಣೆಗಾಗಿ ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ಪ್ರಸಕ್ತ ಸಾಲಿನಿಂದ ₹900 ವಾರ್ಷಿಕ ತೆರಿಗೆ ನಿಗದಿ ಪಡಿಸಲಾಗಿದೆ’ ಎಂದುಸೂಲಿಕೆರೆ ಗ್ರಾಮ ಪಂಚಾಯಿತಿಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ತಿಳಿಸಿದರು.</p>.<p>ಸೂಲಿಕೆರೆ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಡುಗೆ ಕೋಣೆಯ ಸಂಖ್ಯೆ ಆಧರಿಸಿ ದರ ನಿಗದಿ ಮಾಡಲಾಗುತ್ತಿದೆ. ಗ್ರಾಮೀಣ ಭಾಗಗಳಿಗೂ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ಘನತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಯ ಅಗತ್ಯವಿದೆ. ಇದಕ್ಕಾಗಿ ₹35 ಲಕ್ಷ ಮೊತ್ತದ ಕ್ರಿಯಾ ಯೋಜನೆ ರೂಪಿಸಲಾಗಿದೆ. ಈ ಹಣವನ್ನು ಬಳಕೆದಾರರಿಂದ ಪಡೆಯಲು ತೆರಿಗೆ ಸಂಗ್ರಹಕ್ಕೆ ಕ್ರಮ ವಹಿಸಲಾಗಿದೆ’ ಎಂದರು.</p>.<p>‘ನೀರಿನ ದರ ಹಾಗೂ ಕಟ್ಟಡ ತೆರಿಗೆಯನ್ನೂ ಪರಿಷ್ಕರಿಸಲಾಗಿದೆ. ನಾಗರಿಕರು ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗವೇಣಿ,‘ಕೋವಿಡ್ ಮೂರನೇ ಅಲೆಯ ಸೂಚನೆ ಇದೆ. ಸೂಲಿಕೆರೆ ವ್ಯಾಪ್ತಿಯಲ್ಲಿ ಶೇ 80ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ಉಳಿದವರೂ ಶೀಘ್ರವಾಗಿ ಲಸಿಕೆ ಹಾಕಿಸಿಕೊಳ್ಳಿ’ ಎಂದರು.</p>.<p>‘ಕೊಮ್ಮಘಟ್ಟ ಕೆರೆಗೆ ಸುತ್ತಮುತ್ತಲ ಬಡಾವಣೆಗಳ ಕೊಳಚೆ ನೀರು ಸೇರುತ್ತಿದೆ. ವರ್ಷ ಕಳೆದರೂ ವೃದ್ಧಾಪ್ಯ ವೇತನ, ವಿಧವಾ ವೇತನ ಖಾತೆಗೆ ಜಮಾ ಆಗುತ್ತಿಲ್ಲ.ಪಶುವೈದ್ಯರು ಗ್ರಾಮಗಳತ್ತ ಸುಳಿಯುತ್ತಲೇ ಇಲ್ಲ. ದನ–ಕರುಗಳಿಗೆ ಅನಾರೋಗ್ಯ ಉಂಟಾದರೆ ಏನು ಮಾಡಬೇಕು’ ಎಂದು ಗ್ರಾಮಸ್ಥರು ಸಭೆಯಲ್ಲಿ ಅಳಲು ತೋಡಿಕೊಂಡರು.</p>.<p>ಸಭೆಯಲ್ಲಿ 25 ಮಂದಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ವಿತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>