ವಕೀಲ ಪ್ರವೀಣ್ ಕುಮಾರ್ ಮಾತನಾಡಿ, ‘ರೈತರ, ಸರ್ಕಾರದ ಭೂಮಿ ಗುಳುಂ ಆಗಿದೆ. ತನಿಖೆ ನಡೆದರೆ ಎಲ್ಲಾ ಸತ್ಯಾಸತ್ಯತೆ ಹೊರ ಬರಲಿದೆ’ ಎಂದು ಆರೋಪಿಸಿದರು. ಸ್ಥಳಕ್ಕೆ ಬಂದ ಬೆಂಗಳೂರು ದಕ್ಷಿಣ ಜಿಲ್ಲೆ ಎ.ಸಿ. ರಘುನಂದನ್, ದಾಖಲಾತಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.