<p><strong>ಕೆಂಗೇರಿ</strong>: ಕ್ರೀಡೆಗಳಿಗೆ ಶಿಕ್ಷಣದಷ್ಟೇ ಪ್ರಾಮುಖ್ಯತೆ ದೊರಕಬೇಕು. ಪ್ರಸ್ತುತ ಕ್ರೀಡೆಗಳಿಗೂ ಜೀವನ ರೂಪಿಸುವ ಶಕ್ತಿ ಒದಗಿ ಬಂದಿದೆ ಎಂದು ಬಿಜೆಪಿ ಯಶವಂತಪುರ ಕ್ಷೇತ್ರ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಮಾರೇಗೌಡ ಹೇಳಿದರು.</p>.<p>ಶ್ರೀ ಪೂಜ್ಯ ಭಾರತ ಜನಜಾಗೃತಿ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಹಾಗೂ ವಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. </p>.<p>‘ಕೇಂದ್ರ ಸರ್ಕಾರವು ಕ್ರೀಡೆಗಳಿಗೆ ಉತ್ತಮ ಸಹಕಾರ ನೀಡುವುದರ ಜತೆಗೆ ಕ್ರೀಡಾಪಟುಗಳಿಗೆ ಅಗತ್ಯ ಬೆಂಬಲ ನೀಡುತ್ತಿದೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಬಹು ಮುಖ್ಯ ಪಾತ್ರ ವಹಿಸುತ್ತದೆ’ ಎಂದರು. </p>.<p>ಇದೇ ವೇಳೆ ವೇದಿಕೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ, ಅಂಗವಿಕಲರಿಗೆ ಗಾಲಿ ಕುರ್ಚಿ, ವಾಕರ್ ಸ್ಟ್ಯಾಂಡ್ಗಳನ್ನು ನೀಡಲಾಯಿತು.</p>.<p>ಟೊಯೊಟಾ ಕಾರ್ಮಿಕ ಸಂಘದ ಅಧ್ಯಕ್ಷ ದೀಪಕ್ ಎಸ್.ಆರ್., ಬಿಬಿಎಂಪಿ ಮಾಜಿ ಸದಸ್ಯ ರಾ.ಆಂಜಿನಪ್ಪ ಹನುಮಂತೇಗೌಡ, ದೇವರಾಜು, ನಾಗರಾಜು, ಜೆ.ರಮೇಶ್, ಕುಮಾರ್, ಟೊಯೊಟಾ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ಕ್ರೀಡೆಗಳಿಗೆ ಶಿಕ್ಷಣದಷ್ಟೇ ಪ್ರಾಮುಖ್ಯತೆ ದೊರಕಬೇಕು. ಪ್ರಸ್ತುತ ಕ್ರೀಡೆಗಳಿಗೂ ಜೀವನ ರೂಪಿಸುವ ಶಕ್ತಿ ಒದಗಿ ಬಂದಿದೆ ಎಂದು ಬಿಜೆಪಿ ಯಶವಂತಪುರ ಕ್ಷೇತ್ರ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಮಾರೇಗೌಡ ಹೇಳಿದರು.</p>.<p>ಶ್ರೀ ಪೂಜ್ಯ ಭಾರತ ಜನಜಾಗೃತಿ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಹಾಗೂ ವಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. </p>.<p>‘ಕೇಂದ್ರ ಸರ್ಕಾರವು ಕ್ರೀಡೆಗಳಿಗೆ ಉತ್ತಮ ಸಹಕಾರ ನೀಡುವುದರ ಜತೆಗೆ ಕ್ರೀಡಾಪಟುಗಳಿಗೆ ಅಗತ್ಯ ಬೆಂಬಲ ನೀಡುತ್ತಿದೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಬಹು ಮುಖ್ಯ ಪಾತ್ರ ವಹಿಸುತ್ತದೆ’ ಎಂದರು. </p>.<p>ಇದೇ ವೇಳೆ ವೇದಿಕೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ, ಅಂಗವಿಕಲರಿಗೆ ಗಾಲಿ ಕುರ್ಚಿ, ವಾಕರ್ ಸ್ಟ್ಯಾಂಡ್ಗಳನ್ನು ನೀಡಲಾಯಿತು.</p>.<p>ಟೊಯೊಟಾ ಕಾರ್ಮಿಕ ಸಂಘದ ಅಧ್ಯಕ್ಷ ದೀಪಕ್ ಎಸ್.ಆರ್., ಬಿಬಿಎಂಪಿ ಮಾಜಿ ಸದಸ್ಯ ರಾ.ಆಂಜಿನಪ್ಪ ಹನುಮಂತೇಗೌಡ, ದೇವರಾಜು, ನಾಗರಾಜು, ಜೆ.ರಮೇಶ್, ಕುಮಾರ್, ಟೊಯೊಟಾ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>