ಅಮಲ್ ನಾಥ್ನಿಂದ ಗಾಂಜಾ ಮಾರುವ ಮಾಹಿತಿ ಪಡೆದಿದ್ದ ಆರೋಪಿಗಳು, ವ್ಯಕ್ತಿಯೊಬ್ಬರಿಂದ ವಿಶಾಖಪಟ್ಟಣ ಹಾಗೂ ಆಂಧ್ರಪ್ರದೇಶದ ಗಡಿ ಭಾಗಗಳಿಂದ ಕಾರು, ಟ್ರಕ್ ಹಾಗೂ ಲಾರಿಗಳಲ್ಲಿ ಗಾಂಜಾ ತರಿಸಿಕೊಂಡು ಅತ್ತಿಬೆಲೆಯಲ್ಲಿ ತಾವು ವಾಸವಿರುವ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು. ಬಳಿಕ ಅಲ್ಲಿಂದ ಗಾಂಜಾ ಮಾರಾಟ ನಡೆಯುತ್ತಿತ್ತು ಎನ್ನಲಾಗಿದೆ.
ಕೊತ್ತನೂರು ಬಳಿ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬನಿಂದ ಎಂಡಿಎಂಎ ಖರೀದಿಸಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ.