‘ಬೈಕ್ ಚಾಲಕನಾಗಿದ್ದ ಶಹಾಬುದ್ದೀನ್, ಸ್ಥಳಕ್ಕೆ ಬಂದು ಯುವತಿಯನ್ನು ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ. ನೀಲಾದ್ರಿನಗರದ ನಿಗದಿತ ಸ್ಥಳದಲ್ಲಿ ಬೈಕ್ ನಿಲ್ಲಿಸಿದ ಶಹಾಬುದ್ದೀನ್, ಸ್ನೇಹಿತ ಅಖ್ತರ್ ಜೊತೆ ಸೇರಿ ಯುವತಿಯನ್ನು ಅಪಹರಿಸಿಕೊಂಡು ಕೊಠಡಿಯೊಂದಕ್ಕೆ ಕರೆದೊಯ್ದಿದ್ದ. ಅದೇ ಕೊಠಡಿಯಲ್ಲಿ ಇಬ್ಬರೂ ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಇದಾದ ನಂತರ, ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಗತಿ ಗೊತ್ತಿದ್ದರೂ ಆರೋಪಿತ ಯುವತಿ ಸುಮ್ಮನಿದ್ದರು. ಅಸ್ವಸ್ಥಗೊಂಡಿದ್ದ ಯುವತಿ, ಬೇರೆ ಸ್ನೇಹಿತರ ಸಹಾಯದಿಂದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು.’