<p><strong>ಬೆಂಗಳೂರು:</strong> ನಗರ ಹೊರವಲಯದ ಬೊಮ್ಮಸಂದ್ರದ ಕಾಲೇಜೊಂದರ ಹಾಸ್ಟೆಲ್ನಲ್ಲಿ ಕೇರಳದ ವಿದ್ಯಾರ್ಥಿ ಎ.ಪಿ.ಆದಿತ್ಯನ್(19) ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಘಟನೆಯು ಏಪ್ರಿಲ್ 29ರಂದು ನಡೆದಿದೆ.</p>.<p>ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ವಿದ್ಯಾರ್ಥಿ ಆದಿತ್ಯನ್ ತಂದೆ ಪ್ರದೀಪ್ ಆರೋಪಿಸಿದ್ದಾರೆ.</p>.<p>ಆದಿತ್ಯನ್ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದರು. ಕಾಲೇಜಿನ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 29ರಂದು ಆದಿತ್ಯನ್ ವಾಸವಿದ್ದ ಕೊಠಡಿಯ ಬಾಗಿಲು ತೆರೆಯದೇ ಇದ್ದಾಗ ಸ್ನೇಹಿತರಿಗೆ ಅನುಮಾನ ಬಂದಿತ್ತು. ಬಾಗಿಲು ತಟ್ಟಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ, ಬಾಗಿಲು ಒಡೆದು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ತಕ್ಷಣ ವಿಷಯವನ್ನು ಹಾಸ್ಟೆಲ್ ವಾರ್ಡನ್ ಹಾಗೂ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ವಿದ್ಯಾರ್ಥಿಗಳು ತಂದಿದ್ದರು ಎಂದು ಮೂಲಗಳು ಹೇಳಿವೆ.</p>.<p>ಮಾದಕವಸ್ತು ಸೇವನೆ ಪ್ರಕರಣದಲ್ಲಿ ಪುತ್ರನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಲಾಗಿದೆ. ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರದೀಪ್ ಆರೋಪ ಮಾಡಿದ್ದಾರೆ.</p>.<p>‘ಪೊಲೀಸರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಪುತ್ರ ಎಲ್ಲರ ಜತೆಗೆ ಬೆರೆಯುತ್ತಿದ್ದ. ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಲಾಗಿದೆ. ಅದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಅವರು ದೂರಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನಿಖೆ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಹೊರವಲಯದ ಬೊಮ್ಮಸಂದ್ರದ ಕಾಲೇಜೊಂದರ ಹಾಸ್ಟೆಲ್ನಲ್ಲಿ ಕೇರಳದ ವಿದ್ಯಾರ್ಥಿ ಎ.ಪಿ.ಆದಿತ್ಯನ್(19) ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಘಟನೆಯು ಏಪ್ರಿಲ್ 29ರಂದು ನಡೆದಿದೆ.</p>.<p>ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ವಿದ್ಯಾರ್ಥಿ ಆದಿತ್ಯನ್ ತಂದೆ ಪ್ರದೀಪ್ ಆರೋಪಿಸಿದ್ದಾರೆ.</p>.<p>ಆದಿತ್ಯನ್ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದರು. ಕಾಲೇಜಿನ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p>ಏಪ್ರಿಲ್ 29ರಂದು ಆದಿತ್ಯನ್ ವಾಸವಿದ್ದ ಕೊಠಡಿಯ ಬಾಗಿಲು ತೆರೆಯದೇ ಇದ್ದಾಗ ಸ್ನೇಹಿತರಿಗೆ ಅನುಮಾನ ಬಂದಿತ್ತು. ಬಾಗಿಲು ತಟ್ಟಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ, ಬಾಗಿಲು ಒಡೆದು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ತಕ್ಷಣ ವಿಷಯವನ್ನು ಹಾಸ್ಟೆಲ್ ವಾರ್ಡನ್ ಹಾಗೂ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ವಿದ್ಯಾರ್ಥಿಗಳು ತಂದಿದ್ದರು ಎಂದು ಮೂಲಗಳು ಹೇಳಿವೆ.</p>.<p>ಮಾದಕವಸ್ತು ಸೇವನೆ ಪ್ರಕರಣದಲ್ಲಿ ಪುತ್ರನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಲಾಗಿದೆ. ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರದೀಪ್ ಆರೋಪ ಮಾಡಿದ್ದಾರೆ.</p>.<p>‘ಪೊಲೀಸರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಪುತ್ರ ಎಲ್ಲರ ಜತೆಗೆ ಬೆರೆಯುತ್ತಿದ್ದ. ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಲಾಗಿದೆ. ಅದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಅವರು ದೂರಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನಿಖೆ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>