<p><strong>ಬೆಂಗಳೂರು:</strong> ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರಿಕರು ‘ಕೆರೆ ಮಿತ್ರ’ ಸ್ವಯಂ ಸೇವಕರಾಗಿ ನೋಂದಾಯಿಸುವ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಲಾಗಿದೆ. ಮಾರ್ಚ್ 25ರವರೆಗೆ ನಾಗರಿಕರು ನೋಂದಣಿ ಮಾಡಿಕೊಳ್ಳಬಹುದು.</p>.<p>124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರಿಕರು ನೋಂದಾಯಿಸದೆ ಇರುವುದರಿಂದ ಅವಧಿ ವಿಸ್ತರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.</p><p>https://keremithra.bbmpgov.in/registration ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು. ಮೊದಲ ಹಂತದಲ್ಲಿ ‘ಕೆರೆ ಮಿತ್ರ’ರಾಗಲು 744 ಮಂದಿ ನೋಂದಾಯಿಸಿಕೊಂಡಿದ್ದರು. ಒಂದು ಕೆರೆಗೆ ಒಂದಕ್ಕಿಂತ ಹೆಚ್ಚು ನಾಗರಿಕರು ನೋಂದಾಯಿಸಿಕೊಂಡಿದ್ದು, ಒಬ್ಬರನ್ನು ಕಂಪ್ಯೂಟರ್ ಮೂಲಕ ರ್ಯಾಂಡಮೈಸ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.</p><p><strong>ಕಚೇರಿ ಸ್ಥಳಾಂತರ:</strong> ಬಿಬಿಎಂಪಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ನಗರಯೋಜನೆ ಸಹಾಯಕ ನಿರ್ದೇಶಕ ಕಚೇರಿಯನ್ನು ಜಂಟಿ ಆಯುಕ್ತರ ಕಚೇರಿಯಿಂದ ಸ್ಥಳಾಂತರಿಸಲಾಗಿದೆ.</p><p>ಜೆ.ಪಿ ನಗರ, 8ನೇ ಹಂತ, ಗೊಟ್ಟಿಗೆರೆಯ ರಾಯಲ್ಕೌಂಟಿ ಬಡಾವಣೆಯ ಉದ್ಯಾನ ದಲ್ಲಿರುವ ಪಾಲಿಕೆ ಕಟ್ಟಡದ ಮೊದಲನೇ ಮಹಡಿಗೆ ಕಚೇರಿ ಸ್ಥಳಾಂತರಿಸಲಾಗಿದೆ ಎಂದು ನಗರ ಯೋಜನೆ ಸಹಾಯಕ ನಿರ್ದೇಶಕ ಪ್ರಕಾಶ್ ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರಿಕರು ‘ಕೆರೆ ಮಿತ್ರ’ ಸ್ವಯಂ ಸೇವಕರಾಗಿ ನೋಂದಾಯಿಸುವ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಲಾಗಿದೆ. ಮಾರ್ಚ್ 25ರವರೆಗೆ ನಾಗರಿಕರು ನೋಂದಣಿ ಮಾಡಿಕೊಳ್ಳಬಹುದು.</p>.<p>124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರಿಕರು ನೋಂದಾಯಿಸದೆ ಇರುವುದರಿಂದ ಅವಧಿ ವಿಸ್ತರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.</p><p>https://keremithra.bbmpgov.in/registration ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು. ಮೊದಲ ಹಂತದಲ್ಲಿ ‘ಕೆರೆ ಮಿತ್ರ’ರಾಗಲು 744 ಮಂದಿ ನೋಂದಾಯಿಸಿಕೊಂಡಿದ್ದರು. ಒಂದು ಕೆರೆಗೆ ಒಂದಕ್ಕಿಂತ ಹೆಚ್ಚು ನಾಗರಿಕರು ನೋಂದಾಯಿಸಿಕೊಂಡಿದ್ದು, ಒಬ್ಬರನ್ನು ಕಂಪ್ಯೂಟರ್ ಮೂಲಕ ರ್ಯಾಂಡಮೈಸ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.</p><p><strong>ಕಚೇರಿ ಸ್ಥಳಾಂತರ:</strong> ಬಿಬಿಎಂಪಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ನಗರಯೋಜನೆ ಸಹಾಯಕ ನಿರ್ದೇಶಕ ಕಚೇರಿಯನ್ನು ಜಂಟಿ ಆಯುಕ್ತರ ಕಚೇರಿಯಿಂದ ಸ್ಥಳಾಂತರಿಸಲಾಗಿದೆ.</p><p>ಜೆ.ಪಿ ನಗರ, 8ನೇ ಹಂತ, ಗೊಟ್ಟಿಗೆರೆಯ ರಾಯಲ್ಕೌಂಟಿ ಬಡಾವಣೆಯ ಉದ್ಯಾನ ದಲ್ಲಿರುವ ಪಾಲಿಕೆ ಕಟ್ಟಡದ ಮೊದಲನೇ ಮಹಡಿಗೆ ಕಚೇರಿ ಸ್ಥಳಾಂತರಿಸಲಾಗಿದೆ ಎಂದು ನಗರ ಯೋಜನೆ ಸಹಾಯಕ ನಿರ್ದೇಶಕ ಪ್ರಕಾಶ್ ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>