ಕೃತಿಗಳ ಕುರಿತು ಅವರು ಮಾತನಾಡಿದ ದಯ ಗಂಗನಘಟ್ಟ, ‘ಸಂಕ್ರಾಂತಿ ಹಬ್ಬದ ಸಡಗರ ಹಾಗೂ ಜನರ ಬವಣೆಗಳ ಕುರಿತು ಮಾತನಾಡುತ್ತಲೇ ಲೇಖಕರು ಪುನೀತ್ ರಾಜ್ಕುಮಾರ್ ಮರಣದ ಬಗ್ಗೆಯೂ ಹೇಳುತ್ತಾರೆ. ಇದ್ದಕ್ಕಿದ್ದಂತೆಯೇ ಸಾಮಾಜಿಕ ಸಂರಚನೆಯತ್ತ ಹೊರಳುತ್ತಾರೆ. ಹಳ್ಳಿಗಾಡಿನ ಗಟ್ಟಿಗಿತ್ತಿ ಮಹಿಳೆಯರ ಕುರಿತು ಮಾತನಾಡುತ್ತಲೇ ತಮ್ಮ ಪತ್ನಿಯವೈಚಾರಿಕ ಹಾಗೂ ವೈಜ್ಞಾನಿಕ ನೆಲೆಗಟ್ಟಿನ ಚಿಂತನೆಯನ್ನೂ ಮೆಲುಕು ಹಾಕಿದ್ದಾರೆ’ ಎಂದು ತಿಳಿಸಿದರು.