<p><strong>ಬೆಂಗಳೂರ: </strong>‘ಕಬ್ಬನ್ ಪಾರ್ಕ್ನಲ್ಲಿರುವ ಚುನಾವಣಾ ಆಯೋಗದ ಹಳೆಯ ಕಟ್ಟಡ ಮತ್ತು ರಾಜ್ಯ ವಿಮಾ ಇಲಾಖೆಯ ಕಟ್ಟಡಗಳನ್ನು (ಕೆಜಿಐಡಿ) ಹೈಕೋರ್ಟ್ ಸುಪರ್ದಿಗೆ ನೀಡಬೇಕು.ಹೈಕೋರ್ಟ್ನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಹೈಕೋರ್ಟ್ ಕಟ್ಟಡದ ತಳಮಹಡಿಯಲ್ಲಿರುವ (ಬೇಸ್ಮೆಂಟ್) ಎಲ್ಲ ಕಚೇರಿಗಳ ತೆರವಿಗೆ ಆದೇಶಿಸಲು ಕೋರಿ ತುಮಕೂರಿನ ವಕೀಲ ಎಲ್.ರಮೇಶ್ ನಾಯ್ಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ತಾಂತ್ರಿಕ ಶಿಕ್ಷಣ ಇಲಾಖೆಯ ಕಟ್ಟಡದಲ್ಲಿ ಎರಡು ಕೊಠಡಿಗಳನ್ನು ಈಗಾಗಲೇ ಹೈಕೋರ್ಟ್ಗೆ ನೀಡಲಾಗಿದೆ. ಸದ್ಯ ಅಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುತ್ತಿಲ್ಲ’ ಎಂದರು.</p>.<p>ಹೈಕೋರ್ಟ್ ಪರ ಹಿರಿಯ ವಕೀಲ ಎಸ್.ಎಸ್.ನಾಗಾನಂದ,‘ಹೈಕೋರ್ಟ್ನ ಸಮೀಪದಲ್ಲೇ ಇರುವ ಚುನಾವಣಾ ಆಯೋಗದ ಹಳೆಯ ಕಟ್ಟಡ ಮತ್ತು ಕೆಜಿಐಡಿ ಕಚೇರಿಗಳಿರುವ ಕಟ್ಟಡಗಳನ್ನು ಹೈಕೋರ್ಟ್ಗೆ ಹಸ್ತಾಂತರಿಸಿದರೆ ಈ ಸಮಸ್ಯೆ ತಕ್ಷಣವೇ ಬಗೆಹರಿಯಲಿದೆ’ ಎಂದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಈ ಎರಡೂ ಕಟ್ಟಡಗಳನ್ನು ಹೈಕೋರ್ಟ್ಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಸರ್ಕಾರವನ್ನು ಕೋರುತ್ತಿದೆ’ ಎಂದು ಹೇಳಿತು.</p>.<p>‘ಹೈಕೋರ್ಟ್ ಕಟ್ಟಡದ ತಳಮಹಡಿಯ ಜಾಗವನ್ನು ಕಚೇರಿಗಳನ್ನಾಗಿ ಬಳಸುವುದು ನಿಯಮಗಳಿಗೆ ವಿರುದ್ಧ. ಹೆಚ್ಚುವರಿ ಜಾಗ ಕಲ್ಪಿಸಿದರೆ ಅಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಬಹುದು. ಸರ್ಕಾರವು ಈ ಬಗ್ಗೆ ಸಕಾರಾತ್ಮಕವಾಗಿ ಉತ್ತರಿಸುವ ಎಂಬ ವಿಶ್ವಾಸವನ್ನು ನ್ಯಾಯಾಲಯ ಹೊಂದಿದೆ’ ಎಂದು ತಿಳಿಸಿತು. ವಿಚಾರಣೆಯನ್ನು 2022ರ ಜನವರಿ 6ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರ: </strong>‘ಕಬ್ಬನ್ ಪಾರ್ಕ್ನಲ್ಲಿರುವ ಚುನಾವಣಾ ಆಯೋಗದ ಹಳೆಯ ಕಟ್ಟಡ ಮತ್ತು ರಾಜ್ಯ ವಿಮಾ ಇಲಾಖೆಯ ಕಟ್ಟಡಗಳನ್ನು (ಕೆಜಿಐಡಿ) ಹೈಕೋರ್ಟ್ ಸುಪರ್ದಿಗೆ ನೀಡಬೇಕು.ಹೈಕೋರ್ಟ್ನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಹೈಕೋರ್ಟ್ ಕಟ್ಟಡದ ತಳಮಹಡಿಯಲ್ಲಿರುವ (ಬೇಸ್ಮೆಂಟ್) ಎಲ್ಲ ಕಚೇರಿಗಳ ತೆರವಿಗೆ ಆದೇಶಿಸಲು ಕೋರಿ ತುಮಕೂರಿನ ವಕೀಲ ಎಲ್.ರಮೇಶ್ ನಾಯ್ಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ತಾಂತ್ರಿಕ ಶಿಕ್ಷಣ ಇಲಾಖೆಯ ಕಟ್ಟಡದಲ್ಲಿ ಎರಡು ಕೊಠಡಿಗಳನ್ನು ಈಗಾಗಲೇ ಹೈಕೋರ್ಟ್ಗೆ ನೀಡಲಾಗಿದೆ. ಸದ್ಯ ಅಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುತ್ತಿಲ್ಲ’ ಎಂದರು.</p>.<p>ಹೈಕೋರ್ಟ್ ಪರ ಹಿರಿಯ ವಕೀಲ ಎಸ್.ಎಸ್.ನಾಗಾನಂದ,‘ಹೈಕೋರ್ಟ್ನ ಸಮೀಪದಲ್ಲೇ ಇರುವ ಚುನಾವಣಾ ಆಯೋಗದ ಹಳೆಯ ಕಟ್ಟಡ ಮತ್ತು ಕೆಜಿಐಡಿ ಕಚೇರಿಗಳಿರುವ ಕಟ್ಟಡಗಳನ್ನು ಹೈಕೋರ್ಟ್ಗೆ ಹಸ್ತಾಂತರಿಸಿದರೆ ಈ ಸಮಸ್ಯೆ ತಕ್ಷಣವೇ ಬಗೆಹರಿಯಲಿದೆ’ ಎಂದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಈ ಎರಡೂ ಕಟ್ಟಡಗಳನ್ನು ಹೈಕೋರ್ಟ್ಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಸರ್ಕಾರವನ್ನು ಕೋರುತ್ತಿದೆ’ ಎಂದು ಹೇಳಿತು.</p>.<p>‘ಹೈಕೋರ್ಟ್ ಕಟ್ಟಡದ ತಳಮಹಡಿಯ ಜಾಗವನ್ನು ಕಚೇರಿಗಳನ್ನಾಗಿ ಬಳಸುವುದು ನಿಯಮಗಳಿಗೆ ವಿರುದ್ಧ. ಹೆಚ್ಚುವರಿ ಜಾಗ ಕಲ್ಪಿಸಿದರೆ ಅಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಬಹುದು. ಸರ್ಕಾರವು ಈ ಬಗ್ಗೆ ಸಕಾರಾತ್ಮಕವಾಗಿ ಉತ್ತರಿಸುವ ಎಂಬ ವಿಶ್ವಾಸವನ್ನು ನ್ಯಾಯಾಲಯ ಹೊಂದಿದೆ’ ಎಂದು ತಿಳಿಸಿತು. ವಿಚಾರಣೆಯನ್ನು 2022ರ ಜನವರಿ 6ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>