ನೇಪಾಳ, ಬಾಂಗ್ಲಾ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ 50 ಸಾವಿರ ಅಕ್ರಮ ವಲಸಿಗರು ರಾಜ್ಯದಲ್ಲಿ ಇದ್ದಾರೆ. ಇವರನ್ನು ಕೈಗಾರಿಕೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಕಡಿಮೆ ಕೂಲಿ ಎಂಬ ಕಾರಣಕ್ಕೆ, ಅಕ್ರಮ ವಲಸೆಗೆ ಉತ್ತೇಜಿಸಲಾಗುತ್ತಿದೆ. ಇಂತಹವರ ಮೇಲೆ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದರು.