<blockquote>ಅಪಾರ್ಟ್ಮೆಂಟ್, ಡ್ಯುಪ್ಲೆಕ್ಸ್ಗಳಿಗೆ ಹೆಚ್ಚಿನ ಬೇಡಿಕೆ | ಸೂರ್ಯನಗರದಲ್ಲಿ 100 ಡ್ಯುಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವ | ಸಂಪುಟ ಒಪ್ಪಿಗೆ ಬಳಿಕ ಸ್ಟೇಡಿಯಂ ಶಂಕುಸ್ಥಾಪನೆ</blockquote>.<p><strong>ಬೆಂಗಳೂರು:</strong> ಮಧ್ಯಮ ವರ್ಗದ ಜನರಿಂದ ಮನೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು ರಾಯಸಂದ್ರ ಮತ್ತು ಸೂರ್ಯನಗರದಲ್ಲಿ ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸಲು ಕರ್ನಾಟಕ ಗೃಹ ಮಂಡಳಿ ಮುಂದಾಗಿದೆ.</p><p>ಕನಕಪುರ ತಾಲ್ಲೂಕು ರಾಯಸಂದ್ರ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕುವೆಂಪು ಬಡಾವಣೆಯಲ್ಲಿ ಕಡಿಮೆ ಆದಾಯ ಗುಂಪು (ಎಲ್ಐಜಿ) ಮತ್ತು ಮಧ್ಯಮ ಆದಾಯ ಗುಂಪಿನವರಿಗೆ (ಎಂಐಜಿ) ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಕಾರ್ಯ ಸದ್ಯದಲ್ಲೇ ಆರಂಭವಾಗಲಿದೆ.</p><p>ಈಗಾಗಲೇ ಭೂಸ್ವಾಧೀನ ಕಾರ್ಯ ಪೂರ್ಣಗೊಂಡು, ಬಡಾವಣೆ ನಿರ್ಮಾಣವಾಗಿದೆ. ಸಾರ್ವಜನಿಕರಿಂದಲೂ ಮನೆಗಳಿಗೆ ಬೇಡಿಕೆ ಬಂದಿದ್ದು, ಒಂದೂವರೆಯಿಂದ ಎರಡು ವರ್ಷದ ಒಳಗೆ ಡ್ಯುಪ್ಲೆಕ್ಸ್ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಗೃಹಮಂಡಳಿ, ಬಿಡಿಎ ನಿರ್ಮಿಸುವ ಮನೆಗಳ ಬಗ್ಗೆ ಜನರಲ್ಲಿ ಇರುವ ನಕಾರಾತ್ಮಕ ಭಾವನೆ ಹೋಗಬೇಕು, ಖಾಸಗಿಯವರಿಗೆ ಪೈಪೋಟಿ ನೀಡಬೇಕು ಎಂಬ ಉದ್ದೇಶದಿಂದ ಎಲ್ಲ ರೀತಿಯ ಸೌಕರ್ಯಗಳನ್ನು ಒಳಗೊಂಡ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದು ಅವರು ವಿವರಿಸಿದರು.</p><p>ಎಲ್ಐಜಿ ಗುಂಪಿನ ನಿವೇಶನದ ವಿಸ್ತೀರ್ಣ 30X40. ಈ ಜಾಗದಲ್ಲಿ 3ಬಿಎಚ್ಕೆ ಮನೆಗಳನ್ನು<br>ನಿರ್ಮಿಸಲಾಗುತ್ತದೆ. ಇದರ ಮೌಲ್ಯ ₹80 ಲಕ್ಷ. ಎಂಐಜಿ ಗುಂಪಿನ ವಿಸ್ತೀರ್ಣ 30X50. ಈ ಜಾಗದಲ್ಲಿ 3 ಬಿಎಚ್ಕೆ ಮನೆಗಳನ್ನು ನಿರ್ಮಿಸಲಾಗುತ್ತದೆ. ಇದರ ಮೌಲ್ಯ ₹95 ಲಕ್ಷ. ಎರಡೂ ಗುಂಪಿನವರಿಗೆ 3 ಬಿಎಚ್ಕೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಆದರೆ, ವಿಸ್ತೀರ್ಣ ಮತ್ತು ಮೌಲ್ಯದಲ್ಲಿ<br>ವ್ಯತ್ಯಾಸವಿರುತ್ತದೆ.</p><p><strong>ಸೂರ್ಯನಗರ: </strong></p><p>ಸೂರ್ಯನಗರದಲ್ಲೂ ಇದೇ ರೀತಿ ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.</p><p>ಬೇಡಿಕೆ ಸಮೀಕ್ಷೆಗೆ ಸದ್ಯದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಆ ಬಳಿಕ ನಿರ್ಮಾಣ ಕಾರ್ಯ ಶುರುವಾಗಲಿದೆ. ಅಲ್ಲಿ ಗೃಹಮಂಡಳಿಗೆ ಸೇರಿದ ಸಾಕಷ್ಟು ಜಾಗ ಲಭ್ಯವಿದೆ ಎಂದು ತಿಳಿಸಿದರು.</p>.<p><strong>ಸದ್ಯದಲ್ಲೇ ಸಂಪುಟ ಒಪ್ಪಿಗೆ</strong></p><p>ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಸ್ಟೇಡಿಯಂ ನಿರ್ಮಾಣಕ್ಕೆ ಗೃಹ ಮಂಡಳಿಯು ವಸತಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, 15 ದಿನಗಳಲ್ಲಿ ಸಚಿವ ಸಂಪುಟ ಒಪ್ಪಿಗೆ ನೀಡುವ ನಿರೀಕ್ಷೆ ಇದೆ. </p><p>ಸಂಪುಟದ ಒಪ್ಪಿಗೆ ದೊರೆತ ನಂತರ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ನಿರ್ಮಾಣದ ಹೊಣೆಯನ್ನು ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗೆ ನೀಡಿ, 2–3 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು.</p>.<p><strong>ರೈತರ ಪಾಲಿನ ನಿವೇಶನ ಹಂಚಿಕೆ 25ಕ್ಕೆ</strong></p><p>ಸೂರ್ಯನಗರ ನಾಲ್ಕನೇ ಹಂತದಲ್ಲಿ ರೈತರ ಪಾಲಿನ ಶೇ 50ರಷ್ಟು ನಿವೇಶನಗಳನ್ನು ಈ ತಿಂಗಳ 25ರಂದು ಹಂಚಿಕೆ ಮಾಡಲಾಗುತ್ತದೆ. ಇನ್ನುಳಿದ ಶೇ 50 ರಷ್ಟು ನಿವೇಶನಗಳನ್ನು ನಾಗರಿಕರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುತ್ತದೆ. </p><p>1200 ಎಕರೆ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿಪಡಿಸಿದ್ದು ನಾಗರಿಕರಿಗೆ ಸುಮಾರು ನಾಲ್ಕು ಸಾವಿರ ನಿವೇಶನಗಳು ಲಭ್ಯವಾಗಲಿವೆ. ಇವುಗಳ ಹಂಚಿಕೆ ಹಾಗೂ ಅಂತರರಾಷ್ಟ್ರೀಯ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ಒಟ್ಟಿಗೆ ಮಾಡಲು ಮಂಡಳಿಯು ಉದ್ದೇಶಿಸಿದೆ.</p><p>ನಾಲ್ಕನೇ ಹಂತದಲ್ಲಿ ನಿವೇಶನ ಕೋರಿ 17 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸದ್ಯಕ್ಕೆ ನಾಲ್ಕು ಸಾವಿರ ನಿವೇಶನಗಳು ಲಭ್ಯವಿದ್ದು ಚದರ ಅಡಿಗೆ ₹2,200 ದರ ನಿಗದಿಪಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಶೇ 50ರಷ್ಟು ರಿಯಾಯಿತಿ ನೀಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಅಪಾರ್ಟ್ಮೆಂಟ್, ಡ್ಯುಪ್ಲೆಕ್ಸ್ಗಳಿಗೆ ಹೆಚ್ಚಿನ ಬೇಡಿಕೆ | ಸೂರ್ಯನಗರದಲ್ಲಿ 100 ಡ್ಯುಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವ | ಸಂಪುಟ ಒಪ್ಪಿಗೆ ಬಳಿಕ ಸ್ಟೇಡಿಯಂ ಶಂಕುಸ್ಥಾಪನೆ</blockquote>.<p><strong>ಬೆಂಗಳೂರು:</strong> ಮಧ್ಯಮ ವರ್ಗದ ಜನರಿಂದ ಮನೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು ರಾಯಸಂದ್ರ ಮತ್ತು ಸೂರ್ಯನಗರದಲ್ಲಿ ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸಲು ಕರ್ನಾಟಕ ಗೃಹ ಮಂಡಳಿ ಮುಂದಾಗಿದೆ.</p><p>ಕನಕಪುರ ತಾಲ್ಲೂಕು ರಾಯಸಂದ್ರ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕುವೆಂಪು ಬಡಾವಣೆಯಲ್ಲಿ ಕಡಿಮೆ ಆದಾಯ ಗುಂಪು (ಎಲ್ಐಜಿ) ಮತ್ತು ಮಧ್ಯಮ ಆದಾಯ ಗುಂಪಿನವರಿಗೆ (ಎಂಐಜಿ) ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಕಾರ್ಯ ಸದ್ಯದಲ್ಲೇ ಆರಂಭವಾಗಲಿದೆ.</p><p>ಈಗಾಗಲೇ ಭೂಸ್ವಾಧೀನ ಕಾರ್ಯ ಪೂರ್ಣಗೊಂಡು, ಬಡಾವಣೆ ನಿರ್ಮಾಣವಾಗಿದೆ. ಸಾರ್ವಜನಿಕರಿಂದಲೂ ಮನೆಗಳಿಗೆ ಬೇಡಿಕೆ ಬಂದಿದ್ದು, ಒಂದೂವರೆಯಿಂದ ಎರಡು ವರ್ಷದ ಒಳಗೆ ಡ್ಯುಪ್ಲೆಕ್ಸ್ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಗೃಹಮಂಡಳಿ, ಬಿಡಿಎ ನಿರ್ಮಿಸುವ ಮನೆಗಳ ಬಗ್ಗೆ ಜನರಲ್ಲಿ ಇರುವ ನಕಾರಾತ್ಮಕ ಭಾವನೆ ಹೋಗಬೇಕು, ಖಾಸಗಿಯವರಿಗೆ ಪೈಪೋಟಿ ನೀಡಬೇಕು ಎಂಬ ಉದ್ದೇಶದಿಂದ ಎಲ್ಲ ರೀತಿಯ ಸೌಕರ್ಯಗಳನ್ನು ಒಳಗೊಂಡ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದು ಅವರು ವಿವರಿಸಿದರು.</p><p>ಎಲ್ಐಜಿ ಗುಂಪಿನ ನಿವೇಶನದ ವಿಸ್ತೀರ್ಣ 30X40. ಈ ಜಾಗದಲ್ಲಿ 3ಬಿಎಚ್ಕೆ ಮನೆಗಳನ್ನು<br>ನಿರ್ಮಿಸಲಾಗುತ್ತದೆ. ಇದರ ಮೌಲ್ಯ ₹80 ಲಕ್ಷ. ಎಂಐಜಿ ಗುಂಪಿನ ವಿಸ್ತೀರ್ಣ 30X50. ಈ ಜಾಗದಲ್ಲಿ 3 ಬಿಎಚ್ಕೆ ಮನೆಗಳನ್ನು ನಿರ್ಮಿಸಲಾಗುತ್ತದೆ. ಇದರ ಮೌಲ್ಯ ₹95 ಲಕ್ಷ. ಎರಡೂ ಗುಂಪಿನವರಿಗೆ 3 ಬಿಎಚ್ಕೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಆದರೆ, ವಿಸ್ತೀರ್ಣ ಮತ್ತು ಮೌಲ್ಯದಲ್ಲಿ<br>ವ್ಯತ್ಯಾಸವಿರುತ್ತದೆ.</p><p><strong>ಸೂರ್ಯನಗರ: </strong></p><p>ಸೂರ್ಯನಗರದಲ್ಲೂ ಇದೇ ರೀತಿ ಡ್ಯುಪ್ಲೆಕ್ಸ್ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.</p><p>ಬೇಡಿಕೆ ಸಮೀಕ್ಷೆಗೆ ಸದ್ಯದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಆ ಬಳಿಕ ನಿರ್ಮಾಣ ಕಾರ್ಯ ಶುರುವಾಗಲಿದೆ. ಅಲ್ಲಿ ಗೃಹಮಂಡಳಿಗೆ ಸೇರಿದ ಸಾಕಷ್ಟು ಜಾಗ ಲಭ್ಯವಿದೆ ಎಂದು ತಿಳಿಸಿದರು.</p>.<p><strong>ಸದ್ಯದಲ್ಲೇ ಸಂಪುಟ ಒಪ್ಪಿಗೆ</strong></p><p>ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಸ್ಟೇಡಿಯಂ ನಿರ್ಮಾಣಕ್ಕೆ ಗೃಹ ಮಂಡಳಿಯು ವಸತಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, 15 ದಿನಗಳಲ್ಲಿ ಸಚಿವ ಸಂಪುಟ ಒಪ್ಪಿಗೆ ನೀಡುವ ನಿರೀಕ್ಷೆ ಇದೆ. </p><p>ಸಂಪುಟದ ಒಪ್ಪಿಗೆ ದೊರೆತ ನಂತರ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ನಿರ್ಮಾಣದ ಹೊಣೆಯನ್ನು ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗೆ ನೀಡಿ, 2–3 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು.</p>.<p><strong>ರೈತರ ಪಾಲಿನ ನಿವೇಶನ ಹಂಚಿಕೆ 25ಕ್ಕೆ</strong></p><p>ಸೂರ್ಯನಗರ ನಾಲ್ಕನೇ ಹಂತದಲ್ಲಿ ರೈತರ ಪಾಲಿನ ಶೇ 50ರಷ್ಟು ನಿವೇಶನಗಳನ್ನು ಈ ತಿಂಗಳ 25ರಂದು ಹಂಚಿಕೆ ಮಾಡಲಾಗುತ್ತದೆ. ಇನ್ನುಳಿದ ಶೇ 50 ರಷ್ಟು ನಿವೇಶನಗಳನ್ನು ನಾಗರಿಕರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುತ್ತದೆ. </p><p>1200 ಎಕರೆ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿಪಡಿಸಿದ್ದು ನಾಗರಿಕರಿಗೆ ಸುಮಾರು ನಾಲ್ಕು ಸಾವಿರ ನಿವೇಶನಗಳು ಲಭ್ಯವಾಗಲಿವೆ. ಇವುಗಳ ಹಂಚಿಕೆ ಹಾಗೂ ಅಂತರರಾಷ್ಟ್ರೀಯ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ಒಟ್ಟಿಗೆ ಮಾಡಲು ಮಂಡಳಿಯು ಉದ್ದೇಶಿಸಿದೆ.</p><p>ನಾಲ್ಕನೇ ಹಂತದಲ್ಲಿ ನಿವೇಶನ ಕೋರಿ 17 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸದ್ಯಕ್ಕೆ ನಾಲ್ಕು ಸಾವಿರ ನಿವೇಶನಗಳು ಲಭ್ಯವಿದ್ದು ಚದರ ಅಡಿಗೆ ₹2,200 ದರ ನಿಗದಿಪಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಶೇ 50ರಷ್ಟು ರಿಯಾಯಿತಿ ನೀಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>