<p><strong>ಕೆಂಗೇರಿ</strong>: ‘ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೆಳದರ್ಜೆಗೆ ಇಳಿಸದೇ ಹೆಚ್ಚಿನ ಸೌಲಭ್ಯ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.</p>.<p>‘ಇಲ್ಲಿನ ವೈದ್ಯರನ್ನು ವರ್ಗ ಮಾಡಲಾಗುತ್ತಿದೆ. ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ 32 ಗ್ರಾಮಗಳ ನಾಗರಿಕರಿಗೆ, ಗರ್ಭಿಣಿಯರಿಗೆ ತೊಂದರೆಯಾಗಲಿದೆ’ ಎಂದು ಬಿ.ಎಂ.ಶಿವಕುಮಾರ್ ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<p>ಪರಿಶೀಲನೆ ನಡೆಸಿದ ಮಾನವ ಹಕ್ಕು ಆಯೋಗ, ‘ಗೌರವಯುತ ಜೀವನಕ್ಕೆ ಆರೋಗ್ಯ ಸೇವೆ ಅನಿವಾರ್ಯ. ಆರೋಗ್ಯ ಸೇವೆ ಸರ್ಕಾರದ ಕರ್ತವ್ಯವಾಗಿದ್ದು, ಸೇವೆ ಕುಂಠಿತಗೊಳಿಸುವ ಕ್ರಮ ಸಂವಿಧಾನದ ಆಶಯಗಳಿಗೆ ವಿರುದ್ಧ. ಜತೆಗೆ ಮಾನವ ಹಕ್ಕುಗಳ ಉಲ್ಲಂಘನೆಗೆ ಸಮಾನವಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಕೇಂದ್ರದ ವೈದ್ಯರನ್ನು ವರ್ಗ ಮಾಡುವ ಸನ್ನಿವೇಶ ಬಂದಲ್ಲಿ, ಪರ್ಯಾಯವಾಗಿ ನುರಿತ ವೈದ್ಯಾಧಿಕಾರಿಗಳನ್ನು ಆರೋಗ್ಯ ಇಲಾಖೆ ನೇಮಿಸಬೇಕು. ಆಸ್ಪತ್ರೆಯಲ್ಲಿನ ವೈದ್ಯಕೀಯ ಹಾಗೂ ಮೂಲ ಸೌಲಭ್ಯಗಳನ್ನು ಹೆಚ್ಚಿಸಬೇಕು’ ಎಂದು ಆಯೋಗ ಸೂಚನೆ ನೀಡಿದೆ.</p>.ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ.<p>ಮೂಲ ಸೌಲಭ್ಯ ಕೊರತೆ ಸಂಬಂಧ ಜ.15 ರಂದು ‘ಬಾಣಂತಿಯರ ಊಟಕ್ಕೂ ಕತ್ತರಿ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು.</p>.<div><blockquote>ಮಾನವ ಹಕ್ಕುಗಳ ಆಯೋಗದದ ವರದಿಯಿಂದ ಗ್ರಾಮೀಣ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಗರ್ಭಿಣಿ ಮಹಿಳೆಯರು ಪ್ರಸೂತಿಗಾಗಿ ಮತ್ತೊಂದು ಸರ್ಕಾರಿ ಆಸ್ಪತ್ರೆಗೆ ಅಲೆಯುವ ಸಂಕಷ್ಟಕ್ಕೆ ಮುಕ್ತಿ ದೊರಕಿದೆ.</blockquote><span class="attribution">– ಬಿ.ಎಂ.ಶಿವಕುಮಾರ್, ದೂರುದಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರವನ್ನು ಕೆಳದರ್ಜೆಗೆ ಇಳಿಸದೇ ಹೆಚ್ಚಿನ ಸೌಲಭ್ಯ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.</p>.<p>‘ಇಲ್ಲಿನ ವೈದ್ಯರನ್ನು ವರ್ಗ ಮಾಡಲಾಗುತ್ತಿದೆ. ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ 32 ಗ್ರಾಮಗಳ ನಾಗರಿಕರಿಗೆ, ಗರ್ಭಿಣಿಯರಿಗೆ ತೊಂದರೆಯಾಗಲಿದೆ’ ಎಂದು ಬಿ.ಎಂ.ಶಿವಕುಮಾರ್ ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<p>ಪರಿಶೀಲನೆ ನಡೆಸಿದ ಮಾನವ ಹಕ್ಕು ಆಯೋಗ, ‘ಗೌರವಯುತ ಜೀವನಕ್ಕೆ ಆರೋಗ್ಯ ಸೇವೆ ಅನಿವಾರ್ಯ. ಆರೋಗ್ಯ ಸೇವೆ ಸರ್ಕಾರದ ಕರ್ತವ್ಯವಾಗಿದ್ದು, ಸೇವೆ ಕುಂಠಿತಗೊಳಿಸುವ ಕ್ರಮ ಸಂವಿಧಾನದ ಆಶಯಗಳಿಗೆ ವಿರುದ್ಧ. ಜತೆಗೆ ಮಾನವ ಹಕ್ಕುಗಳ ಉಲ್ಲಂಘನೆಗೆ ಸಮಾನವಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಕೇಂದ್ರದ ವೈದ್ಯರನ್ನು ವರ್ಗ ಮಾಡುವ ಸನ್ನಿವೇಶ ಬಂದಲ್ಲಿ, ಪರ್ಯಾಯವಾಗಿ ನುರಿತ ವೈದ್ಯಾಧಿಕಾರಿಗಳನ್ನು ಆರೋಗ್ಯ ಇಲಾಖೆ ನೇಮಿಸಬೇಕು. ಆಸ್ಪತ್ರೆಯಲ್ಲಿನ ವೈದ್ಯಕೀಯ ಹಾಗೂ ಮೂಲ ಸೌಲಭ್ಯಗಳನ್ನು ಹೆಚ್ಚಿಸಬೇಕು’ ಎಂದು ಆಯೋಗ ಸೂಚನೆ ನೀಡಿದೆ.</p>.ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ.<p>ಮೂಲ ಸೌಲಭ್ಯ ಕೊರತೆ ಸಂಬಂಧ ಜ.15 ರಂದು ‘ಬಾಣಂತಿಯರ ಊಟಕ್ಕೂ ಕತ್ತರಿ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು.</p>.<div><blockquote>ಮಾನವ ಹಕ್ಕುಗಳ ಆಯೋಗದದ ವರದಿಯಿಂದ ಗ್ರಾಮೀಣ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಗರ್ಭಿಣಿ ಮಹಿಳೆಯರು ಪ್ರಸೂತಿಗಾಗಿ ಮತ್ತೊಂದು ಸರ್ಕಾರಿ ಆಸ್ಪತ್ರೆಗೆ ಅಲೆಯುವ ಸಂಕಷ್ಟಕ್ಕೆ ಮುಕ್ತಿ ದೊರಕಿದೆ.</blockquote><span class="attribution">– ಬಿ.ಎಂ.ಶಿವಕುಮಾರ್, ದೂರುದಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>